ಚಾಮರಾಜನಗರ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವ್ಯಾಪ್ತಿಗೆ ಸೇರಿದ ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ಶಾಲೆಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗಾಗಿ ಇರುವ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ಶಾಲೆಗೆ ಉಸ್ತುವಾರಿ ಕಾರ್ಯದರ್ಶಿ ಭೇಟಿ ಕೊಟ್ಟು ಅಲ್ಲಿ ನೀಡಲಾಗುತ್ತಿರುವ ತರಬೇತಿಗಳು ಹಾಗೂ ಸೌಕರ್ಯಗಳನ್ನು ವೀಕ್ಷಿಸಿದರು.
ಕ್ರೀಡಾ ಶಾಲೆಯಲ್ಲಿ ಕ್ರೀಡಾ ವಿದ್ಯಾರ್ಥಿಗಳಿಗೆ ಕತ್ತಿವರಸೆ, ಬಿಲ್ವಿದ್ಯೆ ತರಬೇತುದಾರರು ನೀಡುತ್ತಿರುವ ತರಬೇತಿ ವಿವರವನ್ನು ಪಡೆದುಕೊಂಡರು. ಕ್ರೀಡಾ ಶಾಲೆಯಲ್ಲಿ ಇರುವ ಕೊಠಡಿಗಳು, ತರಬೇತಿ ಆವರಣ, ಊಟದ ಹಾಲ್, ಇತರೆ ಸೌಲಭ್ಯಗಳನ್ನ ಉಸ್ತುವಾರಿ ಕಾರ್ಯದರ್ಶಿಗಳು ಪರಿಶೀಲಿಸಿದರು.
ತರಬೇತಿಗಾಗಿ ಮತ್ತೊಂದು ಕಾಮಗಾರಿ ಕೈಗೊಂಡಿರುವ ಸ್ಥಳಕ್ಕೆ ಭೇಟಿ ನೀಡಿ ತ್ವರಿತವಾಗಿ ಕೆಲಸ ಮುಗಿಸಬೇಕು. ಹೆಚ್ಚುವರಿ ಅನುದಾನದ ಅವಶ್ಯಕತೆಯಿದ್ದಲ್ಲಿ ಪ್ರಸ್ತಾವ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಬಸವರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ, ಇತರೆ ಅಧಿಕಾರಿಗಳು ಇದ್ದರು.
Like this:
Like Loading...
Related