ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯಿಂದ ಸೋಮವಾರ ಆಲ್ಕಿಯಲ್ಲಿ ನೀರು ಹಾಕಿ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ಅವರ ನೇತೃತದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷೀಯ ಹೆz್ದÁರಿಯಲ್ಲಿ ಆಲ್ಕಿ ನೀರು ಹಾಕಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತವಹಿಸಿದ ಚಾ.ರಂ. ಶ್ರೀನಿವಾಸಗೌಡ ಮಾತನಾಡಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲï, ಗು.ಪುರುಷೋತ್ತಮï, ಮಂಜು, ಪ್ರಕಾಶï, ತಾಂಡವಮೂರ್ತಿ, ವೀರಭದ್ರ, ಚಾ.ಸಿ.ಸಿರಾಜು, ಸಿಶೆಟ್ಟಿ, ರಾಚಪ್ಪ, ಇತರರು ಭಾಗವಹಿಸಿದ್ದರು.