ಕರ್ನಾಟಕ ಬಂದ್ ಬೆಂಬಲಿಸಿ ಯುವಸೇನೆ ಕರ್ನಾಟಕ ಸೇವಾ ಸಂಘದಿಂದ ಉರುಳುಸೇವೆ

ಚಾಮರಾಜನಗರ: ಕರ್ನಾಟಕ ಬಂದ್ ಬೆಂಬಲಿಸಿ ಯುವಸೇನೆ ಕರ್ನಾಟಕ ಸೇವಾ ಸಂಘದ ಪದಾಧಿಕಾರಿಗಳು ಅರೆಬೆತ್ತಲೆಯಾಗಿ ತಲೆಮೇಲೆ ಕಲ್ಲುಹೊತ್ತು, ಖಾಲಿ ಕೊಡ ಹಿಡಿದು, ಉರುಳುಸೇವೆ ಮಾಡುವ ಮೂಲಕ ಪ್ರತಿಭಟಿಸಲಾಯಿತು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವಸೇನೆ ಕರ್ನಾಟಕ ಸೇವಾ ಸಂಘದ ಅಧ್ಯಕ್ಷ ನಮ್ಮನೆ ಪ್ರಶಾಂತ್ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ರಾಷ್ಟಿçÃಯ ಹೆದ್ದಾರಿಯಲ್ಲಿ ಉರುಳುಸೇವೆ ನಡೆಸಿ ಕರ್ನಾಟಕ ಸರ್ಕಾರ, ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ನಮ್ಮನೆ ಪ್ರಶಾಂತ್ ಮಾತನಾಡಿ, ರಾಜ್ಯ ಸರ್ಕಾರ ಕಾವೇರಿ ನೀರಿನ ವಸ್ತುಸ್ಥಿತಿಯನ್ನು ಕಾವೇರಿ ನೀರು ನಿರ್ವಹಣಾ ಮಂಡಳಿಗೆ ತಿಳಿಸಿಕೊಡುವಲ್ಲಿ ವಿಫಲವಾಗಿದೆ. ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಪೇಂಟ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸಿದ್ದಾರ್ಥ್, ಸಿದ್ದರಾಜು, ನಾಗೇಶ್, ಅಂಬರೀಶ್ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *