ಕಾವೇರಿ ಹೋರಾಟ ಕ್ರಿಯಾ ಸಮಿತಿ ರಚನೆ, ಇಂದಿನಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ
ಚಾಮರಾಜನಗರ: ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಯಾವುದೇ ಸಂದರ್ಭದಲ್ಲಿ ರಾಜ್ಯ ಬಂದ್ಗೆ ಕರೆಕೊಟ್ಟಾಂತಹ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯನ್ನು ಬಂದ್ ಮಾಡಿ ಕಾವೇರಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸುವುದಾಗಿ ಇಂದು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ನಗರದ ಪ್ರವಾಸಿಮಂದಿರದಲ್ಲಿ ಕಾವೇರಿ ಹೋರಾಟದ ಬಗ್ಗೆ ಚರ್ಚೆಸಲು ಕನ್ನಡಪರ ಸಂಘಟನೆಗಳು ರೈತಪರ ಸಂಘಟನೆಗಳು ದಲಿತ, ಪ್ರಗತಿಪರ ಸಂಘಟನೆಗಳು ಹಾಗೂ ಎಸ್ ಡಿಪಿಐ, ಬಿಎಸ್ ಪಿ, ವರ್ತಕರ ಸಂಘ ಹಾಗೂ ತಮಿಳು ಸಂಘಟನೆಗಳ ಮುಖಂಡರ ಸಭೆಯಲ್ಲಿ ಕರ್ನಾಟಕ ಬಂದ್ಗೆ ಕರೆಕೊಟ್ಟ ದಿನವೇ ಚಾಮರಾಜನಗರ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ನೀಡುವುದಾಗಿ ನಿರ್ಣಯ ಮಾಡಲಾಯಿತು.
ಸಭೆಯಲ್ಲಿ ತಮಿಳು ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿ, ಕಾವೇರಿ ನೀರಿನ ವಿಚಾರದಲ್ಲಿ ಸುಪ್ರೀಂಕೋರ್ಟ್ ಕಾವೇರಿ ನ್ಯಾಯಾಧೀಕರಣ ಅವೈಜ್ಞಾನಿಕ ತೀರ್ಪು ನೀಡಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಸುಪ್ರೀಂಕೋರ್ಟ್ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯ ಮರಣಶಾಸನ ಬರೆದು ಅನ್ಯಾಯ ಮಾಡಿದೆ. ಇದರ ನಿರಂತರ ಹೋರಾಟ ಮಾಡಲಾಗುವುದು ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜುನಾಥ್ ಮಾಡಿ, ಕಾವೇರಿ ಕಿಚ್ಚು ಮಂಡ್ಯ, ಮೈಸೂರು ಭಾಗಕ್ಕೆ ಇದೊಂದು ರಾಜ್ಯದ ಸಮಸ್ಯೆಯಾಗಿದೆ. ಈ ವಿಚಾರದಲ್ಲಿ ರಾಜ್ಯ ಬಂದ್ಗೆ ಕರೆಕೊಟ್ಟಾಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಬೇಕು ಏಕೆಂದರೆ ಚಾಮರಾಜನಗರ ಪಟ್ಟಣದ ಜನತೆ ಹಾಗೂ ಬಹುಗ್ರಾಮ ಕುಡಿಯುವ ಯೋಜನೆಯಲ್ಲಿ ಕಾವೇರಿ ಕೊಳ್ಳದ ನೀರು ಕುಡಿಯುವುದರಿಂದ ಪಟ್ಟಣ ಹಾಗೂ ಜಿಲ್ಲೆಯ ಜನತೆ ಎಚ್ಚೆತ್ತು ಹೋರಾಟಸದಲ್ಲಿ ಭಾಗವಹಿಸಬೇಕು ಎಂದರು.
ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಭಾಗ್ಯರಾಜ್ ಮಾತನಾಡಿ, ಕುಡಿಯುವ ನೀರಿನ ಹೋರಾಟ ಇದಾಗಿದ್ದು, ಅಖಂಡ ಕರ್ನಾಟಕ ಬಂದ್ ನಮ್ಮ ಸಂಪೂರ್ಣ ಸಹಕಾರ ಇದೆ ಎಂದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕ ಕೆ.ಎಂ.ನಾಗರಾಜು ಮಾತನಾಡಿ, ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ಷೀಣಿಸಿದ್ದು, ರಾಜ್ಯದಲ್ಲಿ ಕುಡಿಯುವ ನೀರಿಗೂ ಬರ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ ಆಗಾಗಿ ಎಲ್ಲ ಸಂಘಟನೆಗಳು ಒಟ್ಟಾಗಿ ಬೀದಿಗಳಿದು ಹೋರಾಟ ಮಾಡಬೇಕಿದೆ ಎಂದರು.
ದಲಿತ ಮುಖಂಡ ಸಿ.ಎಂ.ಕೃಷ್ಣಮೂರ್ತಿ, ಎಸ್ಡಿಪಿಐ ಜಿಲ್ಲಾಧ್ಯಕ್ಷ, ಅಬ್ರಾರ್ ಅಹಮದ್, ವರ್ತಕರ ಸಂಘದ ಅಧ್ಯಕ್ಷ. ರಾಜಶೇಖರ್, ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷ ಪರಶಿವಮೂರ್ತಿ ಮಾತನಾಡಿ ಕಾವೇರಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಲಾಗುವುದು ಎಂದರು. ಸಭೆಯಲ್ಲಿ ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿರಾಜು, ಮಹೇಶ್ಗೌಡ, ಬ್ಯಾಡಮೂಡ್ಲು ಬಸವಣ್ಣ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.