ಚಾಮರಾಜನಗರ ದಸರಾ ಮಹೋತ್ಸವ : ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾ ಭಾಗವಾಗಿ ಚಾಮರಾಜನಗರ ಜಿಲ್ಲೆಯಲ್ಲೂ ದಸರಾ ಆಚರಿಸುವ ಸಂಬಂಧ ಪೂರ್ವ ಸಿದ್ದತೆ ಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಾಮರಾಜನಗರ ದಸರಾ ಆಚರಣೆ ಸಂಬಂಧ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಸೂರು ದಸರಾ ಭಾಗವಾಗಿ ಚಾಮರಾಜನಗರ ಜಿಲ್ಲೆಯಲ್ಲೂ ಈ ಹಿಂದಿನಿಂದ ದಸರಾ ಮಹೋತ್ಸವ ನಡೆಸಲಾಗುತ್ತಿದೆ. ಈಗಾಗಲೇ ಮೈಸೂರು ದಸರಾ ಸಂಬಂಧ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚಾಮರಾಜನಗರ ದಸರಾ ಆಚರಣೆಗೂ ಸೂಚಿಸಲಾಗಿದೆ. ಹೀಗಾಗಿ ಅಧಿಕಾರಿಗಳು ದಸರಾ ಪೂರ್ವ ಸಿದ್ದತಾ ಕಾರ್ಯಗಳನ್ನು ಆರಂಭಿಸಬೇಕೆಂದು ತಿಳಿಸಿದರು.

ಅಕ್ಟೋಬರ್ ನಲ್ಲಿ 4 ದಿನಗಳ ಕಾಲ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ದಸರಾ ಮಹೋತ್ಸವವನ್ನು ಕೈಗೊಳ್ಳಲಾಗುತ್ತದೆ. ತಾಲೂಕು ಕೇಂದ್ರಗಳಲ್ಲಿಯೂ ಗ್ರಾಮೀಣ ದಸರಾ ಏರ್ಪಾಡು ಮಾಡಲಾಗುತ್ತದೆ. ಕಲಾತಂಡಗಳನ್ನು ಆಹ್ವಾನಿಸಿ ಸಾಂಸ್ಕøತಿಕ ಕಾರ್ಯಕ್ರಮಗಳು, ಪರಂಪರೆ, ಸಂಸ್ಕøತಿ ಬಿಂಬಿಸುವ ಹೊಸತನದ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಯುವ ಜನರಿಗೆ ಪ್ರತ್ಯೇಕವಾದ ಕಾರ್ಯಕ್ರಮಗಳನ್ನೂ ಸಹ ಆಯೋಜಿಸಬೇಕು ಎಂದರು.

ದಸರಾದ ಪ್ರಮುಖ ಆಕರ್ಷಣೆಯಾದ ದೀಪಾಲಂಕಾರ ಚೆನ್ನಾಗಿ ಆಗಬೇಕು. ಉತ್ತಮ ವೇದಿಕೆ ನಿರ್ಮಾಣ ಮಾಡಬೇಕು. ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳು ಸೇರಿದಂತೆ ಈ ಹಿಂದೆ ನಡೆಸಿಕೊಂಡು ಬರಲಾಗುತ್ತಿರುವ ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಯಾಗಬೇಕು. ಇದಕ್ಕಾಗಿ ಸಾಂಸ್ಕøತಿಕ ಸಮಿತಿ ಜವಾಬ್ದಾರಿ ಹೆಚ್ಚಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಆಹಾರ ಮೇಳ, ಸಿರಿಧಾನ್ಯ ಮೇಳದಂತಹ ಕಾರ್ಯಕ್ರಮಗಳನ್ನು ನಡೆಸಬಹುದಾಗಿದೆ. ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳು ನೆರವೇರಬೇಕು. ಕಲಾತಂಡಗಳ ಮೆರವಣಿಗೆಯನ್ನೂ ಸಹ ಆಕರ್ಷಕಗೊಳಿಸಬೇಕು. ಹೆಚ್ಚು ಜನರನ್ನು ಸೆಳೆಯುವ ವಿಭಿನ್ನ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ದಸರಾ ಆಚರಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ ಅವರು ಮಾತನಾಡಿ ದಸರಾ ಸಂದರ್ಭಗಳಲ್ಲಿ ವಾಹನ ನಿಲುಗಡೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ನಿರ್ದಿಷ್ಟ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು. ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲರು ಸಹಕರಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *