ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಎಚ್.ಎಸ್. ನಂಜುಂಡಪ್ರಸಾದ್, ಉಪಾಧ್ಯಕ್ಷರಾಗಿ ರಾಯಪ್ಪನ್ ಅವಿರೋಧ ಆಯ್ಕೆ

ಒಕ್ಕೂಟಕ್ಕೆ ಸ್ವಂತ ಕಟ್ಟಡ ಹಾಗೂ ಸಹಕಾರಿ ಶಿಕ್ಷಣ ನೀಡಲು ಹೆಚ್ಚಿನ ಒತ್ತು: ನಂಜುಂಡಪ್ರಸಾದ್
ಚಾಮರಾಜನಗರ: ಜಿಲ್ಲಾ ಸಹಕಾರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಚಾಮುಲ್ ನಿರ್ದೇಶಕ ಎಚ್.ಎಸ್. ನಂಜುಂಡಪ್ರಸಾದ್ ಹಾಗೂ ಉಪಾಧ್ಯಕ್ಷರಾಗಿ ರಾಯಪ್ಪನ್ ಅವರು ಅವಿರೋಧವಾಗಿ ಆಯ್ಕೆಯಾದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಸಹಕಾರ ಒಕ್ಕೂಟದ ಕಚೇರಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಂಜುಂಡಪ್ರಸಾದ್, ಉಪಾಧ್ಯಕ್ಷ ಸ್ಥಾನಕ್ಕೆ ರಾಯಪ್ಪನ್ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕ ದಯಾನಂದ ಅಧಿಕೃತವಾಗಿ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್ ಮಾತನಾಡಿ, ಜಿಲ್ಲಾ ಸಹಕಾರ ಒಕ್ಕೂಟದ ನೂತನ ಅಧ್ಯಕ್ಷರನ್ನಾಗಿ ಎಲ್ಲಾ ನಿರ್ದೇಶಕರು ಸೇರಿ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಅಭಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರದಲ್ಲಿ ಸಹಕಾರ ಭವನ ನಿರ್ಮಾಣ ಹಾಗೂ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕರಿಗೆ ಸಹಕಾರ ಶಿಕ್ಷಣದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಸಹಕಾರ ಸಪ್ತಾಹವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಎಲ್ಲಾ ನಿರ್ದೇಶಕರು ಸಹಕಾರ ನೀಡಬೇಕು. ಎಲ್ಲರು ಒಗ್ಗಟ್ಟಿನಿಂದ ಸಹಕಾರಿ ರಂಗವನ್ನು ಜಿಲ್ಲೆಯಲ್ಲಿ ಹೆಚ್ಚಿನ ರೀತಿಯಲ್ಲಿ ಪ್ರಗತಿ ಮಾಡಲು ಶ್ರಮಿಸೋಣ ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ರಾಯಪ್ಪನ್, ನಿರ್ದೇಶಕರಾದ ಎಚ್.ಎಂ. ಮಹದೇವಪ್ರಭು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಎಂ. ಬಸವಣ್ಣ, ಎಂ.ಎಂ. ನಾಗರಾಜು, ಅಮಚವಾಡಿ ನಾಗಸುಂದರ್, ಜಿ. ಮಡಿವಾಳಪ್ಪ, ಎಚ್.ಎನ್. ಸುಂದರರಾಜ್, ಎಂ.ಎಂ. ಪ್ರಭುಸ್ವಾಮಿ, ಮುದ್ದಯ್ಯ, ಎಂ. ರವಿ, ಪಿ. ಮಹದೇವಸ್ವಾಮಿ, ದಾಕ್ಷಾಯಿಣಿ, ಜಯಶೀಲಾ,ಸಹಾಯಕ ಚುನಾವಣಾಧಿಕಾರಿ ಸುರೇಶ್, ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯೋಗೇಂದ್ರ ನಾಯಕ್, ಮ್ಯಾನೇಜರ್ ಮಲ್ಲಿಕಾರ್ಜುನಸ್ವಾಮಿ, ಮಲ್ಲೇಶಪ್ಪ, ಕೆಂಡಗಣ್ಣ ಇದ್ದರು.

ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಚಾಮುಲ್ ನಿರ್ದೇಶಕ ತಾರೀಕ್, ಬ್ಲಾಕ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ರಾಜಶೇಖರ್, ಮುನಿರಾಜು, ಎಚ್.ಎನ್. ನಾಗರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಆಲ್ದೂರು ರಾಜಶೇಖರ್, ಮಲ್ಲಿಕಾರ್ಜುನ ಅನೇಕರು ಅಭಿನಂದಿಸಿದರು.

Leave a Reply

Your email address will not be published. Required fields are marked *