ಚಾಮರಾಜನಗರ: ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಲ್ಲಾ ವರ್ಗದ ರೈತರಿಗೆ ತೆಂಗು ಪ್ರದೇಶ ವಿಸ್ತರಣೆ ಕೈಗೊಳ್ಳಲು ತೋಟಗಾರಿಕೆ ಇಲಾಖೆ ಸಹಾಯಧನ ನೀಡಲಿದೆ.
ರೈತರು ಕನಿಷ್ಠ 0.20 ನಿಂದ 1.00 ಹೆಕ್ಟೇರ್ ವರೆಗೂ ತೆಂಗು ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಗಿಡಕ್ಕೆ 75 ರೂ. ರಂತೆ ಗರಿಷ್ಠ 9225 ರೂ. ಪ್ರತಿ ಹೆಕ್ಟೇರ್ ಗೆ ಸಹಾಯಧನ ನೀಡಲಾಗುವುದು.
ಸದರಿ ಯೋಜನೆಯಡಿ ತೋಟಗಾರಿಕೆ ಇಲಾಖಾ ಕ್ಷೇತ್ರಗಳಿಂದಲೇ ತೆಂಗಿನ ಸಸಿ ಖರೀದಿಸುವುದು ಕಡ್ಡಾಯವಾಗಿದೆ. ರೈತರು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.