ಚಾಮರಾಜನಗರ: ತಾಲೂಕಿನ ದೊಳ್ಳಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಿ ಹಾಗೂ ಲಾಲ್ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು. ಹೆಬ್ಬಸೂರು ಗ್ರಾಮದ ನಿವಾಸಿ ಶೇಷಪ್ಪ ಅವರು ಶಾಲೆಗೆ ಕ್ರೀಡಾ ಸಾಮಗ್ರಿಗಳನ್ನು ಉಚಿತವಾಗಿ ನೀಡಿದರು.
ಗ್ರಾಮದ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶೇಷಪ್ಪ ಅವರು ದೊಳ್ಳಿಪುರ ಸರ್ಕಾರಿ ಶಾಲೆಯ ಮಕ್ಕಳಿಗೆ 20 ಸಾವಿರ ರೂ. ಮೌಲ್ಯದ ಕ್ರೀಡಾ ಸಾಮಗ್ರಿಗಳಾದ ಪುಟ್ಬಾಲ್, ಕ್ರಿಕೆಟ್, ವಾಲಿಬಾಲ್, ಬ್ಯಾಟ್ಮಿಂಟನ್, ಸ್ಪಿಫಿಂಗ್, ಕೇರಂ ಆಟದ ವಿವಿಧ ಸಲಕರಣೆಗಳನ್ನು ಕೊಡುಗೆ ನೀಡಿದರು. ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಹೆಚ್ಚಿನ ಗಮನ ವಹಿಸಬೇಕು. ಗ್ರಾಮೀಣ ಭಾಗದ ಮಕ್ಕಳು ಸಹ ವಿವಿಧ ಕೀಡಾಕೂಟಗಳಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲು ಇದು ಸಹಕಾರಿ ಆಗಲಿ ಎಂದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಾಮಶೆಟ್ಟಿ, ಗ್ರಾ.ಪಂ. ಸದಸ್ಯ ಮಂಜುನಾಥ್, ಮುಖ್ಯ ಶಿಕ್ಷಕ ಕೆ.ಎನ್. ಮಲ್ಲಿಕಾರ್ಜುನಚಾರಿ, ಸಹ ಶಿಕ್ಷಕರಾದ ಸಿದ್ದರಾಜು, ದೇವರಾಜು, ಮಾಜಿ ಸಿಆರ್ಪಿ ಸಿದ್ದರಾಜು, ದೈಹಿಕ ಶಿಕ್ಷಕ ಡಾ. ನಂಜರಾಜ್, ಗೀತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.