ನರ್ಸಿಂಗ್ ವಿದ್ಯಾರ್ಥಿಗಳ ಸೇವೆ ಸ್ಮರಣೀಯ : ಡಿ.ಹೆಚ್.ಒ. ಡಾ.ಚಿದಂಬರ

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನರ್ಸಿಂಗ್ ಕಾಲೇಜಿನ 4ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಹಾಗೂ ಪ್ರತಿಜ್ಞಾವಿಧಿ ಕಾರ್ಯಕ್ರಮ ಬುಧವಾರ (ಡಿ.20) ರಂದು ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಮಾತನಾಡಿ ಶುಶ್ರೂಶಕರು ರೋಗಿಗಳೊಂದಿಗೆ ಒಡನಾಟ ಇಟ್ಟುಕೊಂಡು ಸೇವೆಯಲ್ಲಿ ತೊಡಗುತ್ತಾರೆ. ಇವರ ಸೇವೆಯನ್ನು ರೋಗಿಗಳು ಸದಾ ಸ್ಮರಿಸುತ್ತಾರೆ. ಶುಶ್ರೂಶಕರ ಸೇವಾ ಮನೋಭಾವನೆ ಗುರುತಿಸುವಂತಾಗಿದೆ ಎಂದರು.

ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ. ಹೆಚ್.ಜಿ. ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಿದ್ದರು.

ಮೈಸೂರಿನ ಶಾಂತವೇರಿ ಗೋಪಾಲಗೌಡ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಪ್ರಾಂಶು ಪಾಲರಾದ ಡಾ. ಜಿ.ಎಸ್. ಶಶಿಧರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಇದೇ ವೇಳೆ ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಫ್ಲಾರೆನ್ಸ್ ನೈಟಿಂಗೇಲ್ ಜೀವನ ಚರಿತ್ರೆ ಕುರಿತು ನಾಟಕ ಪ್ರದರ್ಶಿಸಿದರು.

ಜಿಲ್ಲಾ ಸರ್ಜನ್ ಹಾಗೂ ವೈದ್ಯಕೀಯ ಅಧೀಕ್ಷಕರಾದ ಡಾ. ಹೆಚ್.ಎಸ್. ಕೃಷ್ಣಪ್ರಸಾದ್, ಶುಶ್ರೂಶಕ ಅಧೀಕ್ಷಕರಾದ ಎನ್. ಗೀತಾ, ವೈದ್ಯ ಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರೀಶ್.ವಿ. ಪಾಟೀಲ್, ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ. ಎಂ ಮಹೇಶ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಎನ್. ನಮ್ರತಾ, ಇತರರು ಹಾಜರಿದ್ದರು.

Leave a Reply

Your email address will not be published. Required fields are marked *