ಚಾಮರಾಜನಗರ: ತಮಿಳುನಾಡಿನ ಸತ್ಯಮಂಗಲ ನ್ಯಾಯಾಲಯಕ್ಕೆ ವಿಚಾಣೆಗೆಂದು ಕರೆದೊಯ್ಯುತ್ತಿದ್ದ ವಿಚಾರಣಾಧೀನ ಕೈದಿಯೋರ್ವ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ದೇಗುಲದ ಹುಂಡಿ ಕಳ್ಳತನ, ದರೋಡೆ ಹಾಗೂ ನೆರೆ ರಾಜ್ಯ ತಮಿಳುನಾಡಿನ ಈರೋಡ್ ಜಿಲ್ಲಾ ವ್ಯಾಪ್ತಿಯಲ್ಲೂ ಈತನ ವಿರುದ್ಧ ಕಳ್ಳತನದ ಪ್ರಕರಣಗಳು ದಾಖಲಾಗಿದ್ದವು.
ಹತ್ತಾರು ಕಳವು ಪ್ರಕರಣಗಳ ಆರೋಪಿಯಾಗಿದ್ದ ಈತನನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಕೆಲ ದಿನಗಳ ಹಿಂದೆ ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ತಮಿಳುನಾಡು ಸತ್ಯಮಂಗಲಂನ ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯುವಾಗ ಆಸನೂರಿನ ಹೋಟೆಲ್ ಬಳಿ ಪೊಲೀಸರ ಕಣ್ಣಪ್ಪಿಸಿ ಪರಾರಿಯಾಗಿದ್ದಾನೆ. ಚಾಮರಾಜನಗರ ಪೊಲೀಸರು, ಆಸನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಹುಡುಕಾಟಕ್ಕೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.