ಚಾಮರಾಜನಗರ:ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯಕ್ಕೆ ಲಭಿಸುವ ಲಾಭದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಸೆಪ್ಟೆಂಬರ್ ಮೊದಲ ವಾರದಲ್ಲಿ ಅಂದರೆ ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 7ರವರೆಗೆ ರಾಷ್ಟ್ರೀಯ ಪೌಷ್ಟಿಕ ಸಪ್ತಾಹವನ್ನು ಆಚರಿಸಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಆನಂದ್ ಅವರು ತಿಳಿಸಿದರು.
ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಪೌಷ್ಟಿಕ ಆಹಾರ ದಿನ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪೌಷ್ಠಿಕ ಆಹಾರ ಸೇವನೆ ಕೊರತೆಯಿಂದ ಅಪೌಷ್ಟಿಕತೆಯಿಂದ ವಿಶ್ವದಲ್ಲಿ ಸಾಕಷ್ಟು ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹಾಗಾಗಿ ಆರೋಗ್ಯಕರ ಜೀವನ ಶೈಲಿಯನ್ನು ಪಾಲಿಸಬೇಕಾದರೆ ಪ್ರತಿಯೊಬ್ಬರೂ ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವನೆ ಮಾಡಬೇಕು. ಅಲ್ಲದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಒಬ್ಬ ವ್ಯಕ್ತಿಯು ತಾನು ಸೇವಿಸುವ ಆಹಾರದಲ್ಲಿ ಹಲವಾರು ಪೆÇೀಷಕಾಂಶಗಳನ್ನು ಸೇರಿಸಿಕೊಳ್ಳಬೇಕು ಎಂದರು.
ಗರ್ಭಿಣಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿ ಅಗತ್ಯವಿರುವ ಪೆÇೀಷಕಾಂಶಗಳನ್ನು ಪಡೆಯಲು ಪ್ರತಿದಿನ ಸಾಕಷ್ಟು ಕಾರ್ಬೋಹೈಡ್ರೇಟ್, ಫೈಬರ್, ಪೆÇ್ರೀಟಿನ್, ಖನಿಜಗಳು, ವಿಟಮಿನ್ಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇಂತಹ ಪೆÇೀಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಮೂಲಕ ಅನೇಕ ರೋಗಗಳು ಬಾರದಂತೆ ತಡೆಯುತ್ತದೆ. ಆರೋಗ್ಯಕರ ಆಹಾರ ಪದ್ಧತಿ ಮತ್ತು ಸರಿಯಾದ ಪೆÇೀಷಣೆಯ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ ಎಂದರು.
ರಾಷ್ಟ್ರೀಯ ಪೌಷ್ಟಿಕಾಂಶ ದಿನವನ್ನು ಮೊದಲ ಬಾರಿಗೆ ಅಮೆರಿಕನ್ ಅಸೋಸಿಯೇಷನ್ 1975ರಲ್ಲಿ ಆಚರಿಸಿತು. ಪೌಷ್ಟಿಕಾಂಶದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಈ ಆಚರಣೆಯ ಹಿಂದಿನ ಉದ್ದೇಶವಾಗಿತ್ತು. ಈ ಆಚರಣೆ ವ್ಯಾಪಕವಾದ ಮನ್ನಣೆ ಸಿಕ್ಕಿತು. ಇದಾದ ನಂತರ ಭಾರತದಲ್ಲಿ ಮೊದಲ ಬಾರಿಗೆ 1982ರಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹವನ್ನು ಆಚರಿಸಲಾಯಿತು. ಪೌಷ್ಟಿಕಾಂಶದ ಮಹತ್ವದ ಬಗ್ಗೆ ಜನರಿಗೆ ತಿಳಿಸಲು ಆರೋಗ್ಯಕರ ಹಾಗೂ ಉತ್ತಮ ಜೀವನ ಶೈಲಿಯನ್ನು ಪಾಲಿಸಲು ಮತ್ತು ಜನರನ್ನು ಪ್ರೇರೇಪಿಸಲು ಈ ಅಭಿಯಾನವನ್ನು ರಚಿಸಲಾಗಿದೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಆನಂದ್ ಅವರು ತಿಳಿಸಿದರು.
ಪ್ರಧಾನ ನ್ಯಾಯಾಧೀಶರಾದ ಎಂ.ಎನ್. ನಂದಿನಿ ಅವರು ಮಾತನಾಡಿ ಭಾರತದ ಪ್ರತಿಯೊಬ್ಬ ನಾಗರಿಕನು ನವಜಾತ ಶಿಶುವಿನಿಂದ ವಯಸ್ಸಾಗುವವರೆಗೆ ಪೋಷಣೆಯ ಬಗ್ಗೆ ಕಾಳಜಿ ವಹಿಸಲು ಮತ್ತು ಪೌಷ್ಟಿಕಾಂಶದ ಆಹಾರ ಸೇವನೆಯ ಪ್ರಾಮುಖ್ಯತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಅಭಿಯಾನವನ್ನು ಆಚರಿಸಲಾಗುತ್ತದೆ ಎಂದರು.
ಚಾಮರಾಜನಗರ ಪೆÇೀಷಣ್ ಅಭಿಯಾನ ಜಿಲ್ಲಾ ಸಂಯೋಜಕರಾದ ಚೇತನ್ಕುಮಾರ್ ಅವರು ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಿ.ಜೆ. ರಘು, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಡಿ.ಎಸ್. ಬಸವರಾಜು, ಕಾರ್ಯದರ್ಶಿ ಎಂ. ಮೋಹನ್ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಈ. ನಂಜಮಣಿ, ಹಿರಿಯ ವಕೀಲರಾದ ಮಲ್ಲಿಕಾರ್ಜುನ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.