ಬುಡಕಟ್ಟು ಆಶ್ರಮ ಶಾಲೆಗೆ ಮುಖ್ಯಮಂತ್ರಿಗಳ ಭೇಟಿ : ಮಕ್ಕಳೊಂದಿಗೆ ಆತ್ಮೀಯ ಸಂವಾದ

ಚಾಮರಾಜನಗರ: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿರುವ ಕೋಣನಕೆರೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಬುಡಕಟ್ಟು ಆಶ್ರಮ ಶಾಲೆಗೆ ಇಂದು ಭೇಟಿ ನೀಡಿದರು.

ಮುಖ್ಯಮಂತ್ರಿಗಳನ್ನು ಸ್ಥಳೀಯ ಗ್ರಾಮಸ್ಥರು ವಿದ್ಯಾರ್ಥಿಗಳು ಸಾಂಪ್ರದಾಯಿಕ ಗೊರುಕನ ನೃತ್ಯದ ಮೂಲಕ ಬರ ಮಾಡಿಕೊಂಡರು. ಶಾಲಾ ಮಕ್ಕಳು ಗುಲಾಬಿ ಹೂ ನೀಡಿ ಮುಖ್ಯಮಂತ್ರಿಯವರನ್ನು ಸಂತಸದಿಂದ ಸ್ವಾಗತಿಸಿದರು.

ಇದೇ ವೇಳೆ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖ್ಯಮಂತ್ರಿಯವರು ಎಷ್ಟನೆ ತರಗತಿಯಲ್ಲಿ ಓದುತ್ತಿದ್ದೀರ, ನಿಮಗೆ ಏನೇನು ಸೌಲಭ್ಯಗಳಿವೆ ಎಂದು ಕೇಳಿದರು. ಬಳಿಕ ಊಟದ ಹಾಲ್‍ನಲ್ಲಿ ಮಧ್ಯಾಹ್ನದ ಊಟ ಸೇವೆನೆ ಮಾಡುತ್ತಿದ್ದ ಮಕ್ಕಳನ್ನು ನಿಮಗೆ ಊಟಕ್ಕೆ ಏನೇನು ಕೊಡಲಾಗುತ್ತಿದೆ, ಊಟ ರುಚಿಯಾಗಿದೆಯಾ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಯವರು ಆಗಮಿಸುತ್ತಿದ್ದಂತೆ ಮಕ್ಕಳು ಹμÉರ್ೂೀದ್ಗಾರದಿಂದ ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಮುಖ್ಯಮಂತ್ರಿಗಳು ಬುಡಕಟ್ಟು ಜನಾಂಗದ ಮುಖಂಡರು, ಸ್ಥಳೀಯ ಕಾಲೋನಿಯ ಜನರ ಅಹವಾಲುಗಳನ್ನು ಆಲಿಸಿದರು.
ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಹೆಚ್.ಎಂ. ಗಣೇಶ್ ಪ್ರಸಾದ್, ಸಹಕಾರ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಎನ್. ಮಂಜುನಾಥ್ ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಪದ್ಮಿನಿ ಸಾಹು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಇನ್ನಿತರರು ಇದ್ದರು.

Leave a Reply

Your email address will not be published. Required fields are marked *