ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ಅರ್ಜಿ ಆಹ್ವಾನ

ಚಾಮರಾಜನಗರ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿ? ೬೦ ವ?ಗಳಾಗಿರುವ ವ್ಯಕ್ತಿಗಳು ಅಥವಾ ೨೫ ವ?ಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. ೨೦೨೩ರ ಅಕ್ಟೋಬರ್ ೦೨ ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿ? ಜಾತಿ ಮತ್ತು ಪರಿಶಿ? ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

ಸೆಪ್ಟೆಂಬರ್ ೧೫ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. ೧೭, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-೫೬೦ ೦೦೧ ಅಥವಾ ಇ-ಮೇಲ್ : diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *