ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023-24ನೇ ಸಾಲಿಗೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, 2022ನೇ ಸಾಲಿನ ಏಕಲವ್ಯ ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಹಾಗೂ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಂದ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಿದೆ.
2022ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಮತ್ತು 2023-24ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೆÇೀಷಕ ಪ್ರಶಸ್ತಿಗಾಗಿ ಜಿಲ್ಲೆಯ ಅರ್ಹ ಕ್ರೀಡಾಪಟುಗಳು ನಿಗದಿತ ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಪಡೆದು ಭರ್ತಿ ಮಾಡಿ ನವೆಂಬರ್ 22ರೊಳಗಾಗಿ ಸಲ್ಲಿಸಬೇಕು.
ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟುಗಳಿಗೆ, ತರಬೇತುದಾರರಿಗೆ 2022ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಸೇವಾಸಿಂಧು ಆನ್ಲೈನ್ ವೆಬ್ಸೈಟ್: https://sevasindhuservices.karnataka.gov.in ಮೂಲಕ ನವೆಂಬರ್ 30ರೊಳಗೆ ಸಲ್ಲಿಸಬೇಕು.
2021 ಮತ್ತು 2022ನೇ ಸಾಲಿನಲ್ಲಿ ಕರ್ನಾಟಕವನ್ನು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾಗಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಜಿಲ್ಲೆಯ ಅರ್ಹ ಕ್ರೀಡಾಪಟುಗಳು ನವೆಂಬರ್ 23ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ದೂ.ಸಂ. 08226-224932, ಮೊ.ಸಂ 9844160841 ಅನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.