ಚಾಮರಾಜನಗರ: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕವಾದ ನಂತರ ಪ್ರಥಮ ಬಾರಿಗೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ ಮಾಜಿ ಸಚಿವ ಎನ್. ಮಹೇಶ್ ಅವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನಗರ ಘಟಕದ ಅಧ್ಯಕ್ಷ ಎಸ್. ನಂದೀಶ್ ವಿಶ್ವಕರ್ಮ ನೆನಪಿನ ಕಾಣಿಕೆ ನೀಡಿ, ಅಭಿನಂದಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಎನ್. ಮಹೇಶ್ ಅವರನ್ನು ಶಾಲು ಹೊದಿಸಿ, ಹಾರ ಹಾಕಿ, ಎನ್. ಮಹೇಶ್ ಅವರ ಭಾವಚಿತ್ರ ಬಿಡಿಸಿರುವ ಸುಂದರವಾದ ಪೋಟೋವನ್ನು ನೀಡುವ ಮೂಲಕ ನಂದೀಶ್ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್. ನಂದೀಶ್ ವಿಶ್ವಕರ್ಮ ಅವರು ಜಿಲ್ಲೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಸಂಘಟನೆ ಜೊತೆಗೆ ರಾಜ್ಯಾದ್ಯಂತ ಬಿಜೆಪಿಯನ್ನು ಸದೃಢವಾಗಿ ಸಂಘಟನೆ ಮಾಡುವ ನಿಟ್ಟಿನಲ್ಲಿ ಮಹೇಶ್ ಅವರ ಸಂಘಟನಾ ಚತುರತೆಯನ್ನು ಗುರುತಿಸಿ ರಾಷ್ಟ್ರೀಯ ಹಾಗೂ ರಾಜ್ಯ ವರಿಷ್ಟರು ಉಪಾಧ್ಯಕ್ಷ ಹುದ್ದೆಯನ್ನು ನೀಡಿದ್ದು, ಎನ್. ಮಹೇಶ್ ಅವರು ಉತ್ತಮ ವಾಗ್ಮಿಗಳಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನಪರ ಕಾರ್ಯಕ್ರಮಗಳು ಹಾಗೂ ಪಕ್ಷದ ಸಂಘಟನೆಯ ಮೂಲಕ ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಚಾ.ನಗರ ಸೇರಿದಂತೆ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ನಿಟ್ಟಿನಲ್ಲಿ ಶ್ರಮ ವಹಿಸಲಿ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲು ರಾಜ್ಯದಿಂದ ಹೆಚ್ಚು ಸಂಸದರನ್ನು ನೀಡಿದ ಕೀರ್ತಿ ತಮಗೆ ರಾಜ್ಯ ಮುಖಂಡರಿಗೆ ದೊರೆಯಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಿ.ಎಸ್. ನಿರಂಜನ್ಕುಮಾರ್, ಎಸ್. ಬಾಲರಾಜು, ಜಿಲ್ಲಾಧ್ಯಕ್ಷ ಜಿ. ನಾರಾಯಣ ಪ್ರಸಾದ್, ಕೇಂದ್ರ ಬರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಚಾಮುಲ್ ಅಧ್ಯಕ್ಷ ವೈ.ಸಿ. ನಾಗೇಂದ್ರ ಮೊದಲಾಧವರು ಇದ್ದರು.