ಚಾಮರಾಜನಗರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2023-24ನೇ ಸಾಲಿಗೆ ಸೇವಾ ಸಿಂಧು ಯೋಜನೆಯಡಿ 8 ಫಲಾನುಭವಿ ಆಧಾರಿತ ಯೋಜನೆಗಳ ಅಡಿಯಲ್ಲಿ ವಿವಿಧ ಸೌಲಭ್ಯಗಳಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಸಲುವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ಮೆರಿಟ್ ವಿದ್ಯಾರ್ಥಿವೇತನಕ್ಕೆ ಬಹುಮಾನ ಹಣ, ಶಿಶುಪಾಲನಾ ಭ್ಯತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ ಹಾಗೂ ವೈದ್ಯಕೀಯ ಪರಿಹಾರ ನಿಧಿ ಯೋಜನೆ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ವೆಬ್ಸೈಟ್ http://sevasindhuservices.karnataka.gov.in ಪೋರ್ಟಲ್ ಮೂಲಕ ಭರ್ತಿ ಮಾಡಿ ಸೆಪ್ಟೆಂಬರ್ 30ರೊಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿರುವ ಬಗ್ಗೆ ಸ್ವೀಕೃತಿಯ ಹಾರ್ಡ್ ಪ್ರತಿಯನ್ನು ದ್ವಿಪ್ರತಿಯಲ್ಲಿ ಆಯಾ ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್.ಡಬ್ಯೂ) ಅವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ (ದೂ.ಸಂ. 08226-223688), ಚಾಮರಾಜನಗರ ಎಂ.ಆರ್.ಡಬ್ಲ್ಯೂ ರಾಜೇಶ್ (ಮೊ.ಸಂ. 8073716208), ಕೊಳ್ಳೇಗಾಲ ಎಂ,ಆರ್,ಡಬ್ಲ್ಯೂ ಕವಿರತ್ನ (ಮೊ.ಸಂ. 7892715408), ಗುಂಡ್ಲುಪೇಟೆ ಎಂ.ಆರ್.ಡಬ್ಲ್ಯೂ ಮಂಜುಳ (ಮೊ.ಸಂ. 9742423332), ಯಳಂದೂರು ಎಂ.ಆರ್.ಡಬ್ಲ್ಯೂ ಮಹದೇವಮ್ಮ (ಮೊ.ಸಂ. 9740164149) ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.