ಸಮಾಜ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ : ಬಿ.ಕೆ. ರವಿಕುಮಾರ್

ಚಾಮರಾಜನಗರ: ಸಮಾಜ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದ್ದು, ಪ್ರತಿಯೊಬ್ಬರ ಯಶಸ್ಸಿನ ಹಿಂದೆ ಗುರುವಿವ ಕೊಡುಗೆ ಇರುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾ ಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಅತ್ಯುತ್ತಮ ಶಿಕ್ಷಕರಾಗಿದ್ದರು. ತಮ್ಮ ಬದುಕಿನ ಮೂಲಕ ಶಿಕ್ಷಕ ವೃತ್ತಿಯ ಮಹತ್ವವನ್ನು ಜಗತ್ತಿಗೆ ತಿಳಿಸಿಕೊಟ್ಟರು. ಅವರ ಜೀವನಕ್ರಮ ಶಿಕ್ಷಕರಿಗಿರುವ ಅಪಾರ ಜವಬ್ದಾರಿಯನ್ನು ಹೇಳುತ್ತದೆ. ಶಿಕ್ಷಕರ ವೃತ್ತಿ ಅತ್ಯಂತ ಶೇಷ್ಟವಾಗಿದ್ದು, ವೃತ್ತಿ ಧರ್ಮಪಾಲನೆಯಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಗುರುತಾರ ಜವಾಬ್ದಾರಿಯನ್ನು ಡಾ. ರಾಧಾಕೃಷ್ಣನ್ ಅವರು ಸಮರ್ಥವಾಗಿ ನಿಭಾಯಿಸುವ ಜೊತೆಗೆ ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡುವ ಬದಲು ಅಂದು ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡುವಂತೆ ಹೇಳಿದ ಮಹಾನ್ ಪುರುಷ ಎಂದು ಬಣ್ಣಿಸಿದರು.

ಶೈಕ್ಷಣಿಕ ಕ್ಷೇತ್ರದ ಅಭಿವೃದ್ದಿಗಾಗಿ ನಮ್ಮ ಸರ್ಕಾರ ಬಹಳಷ್ಟು ಯೋಜನೆಗಳನ್ನು ಜಾರಿ ಮಾಡುತ್ತಿದೆ. ಶಿಕ್ಷಣ ಕ್ಷೇತ್ರದ ಬೆಳೆವಣಿಗೆಗೆ ಸ್ವಾತಂತ್ರ್ಯ ನಂತರ ಶಾಲೆ ಕಾಲೇಜುಗಳನ್ನು ಆರಂಭಿಸಿ, ಎಲ್ಲರಿಗೂ ಶಿಕ್ಷಣ ದೊರೆಯುವಂತೆ ಮಾಡಿದರು. ವಿಶೇಷವಾಗಿ ಚಾಮರಾಜನಗರ ಜಿಲ್ಲೆಯು ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಕಾಂಗ್ರೆಸ್ ಸರ್ಕಾರ ಶೈಕ್ಷಣಿಕ ಅಭಿವೃದ್ದಿಗಾಗಿ ನೀಡಿರುವ ಕೊಡುಗೆ ಹೆಚ್ಚಿನದ್ದಾಗಿದೆ. ಕೇಂದ್ರೀಯ ವಿದ್ಯಾಲಯ, ಏಕಲವ್ಯ ಶಾಲೆ, ಮುರಾಜಿ ವಸತಿ ಶಾಲೆಗಳು, ಅಂಬೇಡ್ಕರ್ ವಸತಿ ಶಾಲೆ, ಕಸ್ತೂರಬಾ ವಸತಿ ಶಾಲೆ, ಮಹಿಳಾ ಪದವಿ ವಸತಿ ಸಹಿತ ಕಾಲೇಜು ಸೇರಿದಂತೆ ಎಲ್ಲಾ ವರ್ಗದ ಜನರು ಶೈಕ್ಷಣಿಕ ಪ್ರಗತಿಗೆ ಶಾಲೆಗಳನ್ನು ತೆರೆಯುವ ಜೊತೆಗೆ ಉನ್ನತ ಶಿಕ್ಷಣಕ್ಕಾಗಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಚಾಮರಾಜನಗರ ವಿಶ್ವ ವಿದ್ಯಾಲಯ ಸೇರಿದಂತೆ ಅನೇಕ ಸಂಸ್ಥೆಗಳನ್ನು ಆರಂಭಿಸಿದ ಕೀರ್ತಿ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ.

ಬ್ಲಾಕ್ ಕಾಂಗ್ರೆಸ್ ಅದsÀ್ಯಕ್ಷ್ಷ ಎ.ಎಸ್. ಗುರುಸ್ವಾಮಿ ಮಾತನಾಡಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚಿಂತನೆ, ಸಂಶೋಧನೆ, ಬರಹಗಳು ಎಂದಿಗೂ ಶಿಕ್ಷಕರಿಗೆ ಆದರ್ಶವಾಗಿದೆ. ಮಕ್ಕಳಿಗೆ ಮೊದಲ ಗುರು ತಂದೆ-ತಾಯಿಯಾಗಿದ್ದು, ನಂತರ ಶಿಕ್ಷಕರೇ ಗುರು ಸ್ಥಾನವನ್ನು ಸಮರ್ಥವಾಗಿ ತುಂಬುತ್ತಾರೆ. ಶಿಕ್ಷಕರಿಗೆ ಅತ್ಯಂತ ಶೇಷ್ಠ ವೃತ್ತಿ, ಜವಾಬ್ದಾರಿ ಜೊತೆಗೆ ಸಮಾಜದಲ್ಲಿ ಗೌರವ ಹೆಚ್ಚಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಗುರುಸ್ವಾಮಿ, ಎಪಿಎಂಸಿ ನಿರ್ದೇಶಕ ಸೋಮೇಶ್, ಎಸ್ಸಿ ಘಟಕದ ಅಧ್ಯಕ್ಷ ಸೋಮಣ್ಣ, ಮುಖಂಡರಾದ ಸೈಯದ್ ರಫಿ. ಎಎಚ್‍ಎನ್ ಖಾನ್, ಇಮ್ರಾನ್ ಅಹಮದ್, ಜಿ.ಪಂ.ಮಾಜಿ ಸದಸ್ಯ ರಮೇಶ್, ತಾ.ಪಂ. ಸದಸ್ಯ ಮಹದೇವಶೆಟ್ಟಿ, ಅಯೂಬ್ ಖಾನ್, ಜಾವಿದ್, ಪುರುಷೋತ್ತಮ್, ಪುಟ್ಟಸ್ವಾಮಿ, ಪ್ರಕಾಶ್, ಅಬ್ಬಾಸ್, ನಾಗರ್ಜುನಪ್ರಥ್ವಿ, ಮೊದಲಾದವರು ಇದ್ದರು.

Leave a Reply

Your email address will not be published. Required fields are marked *