ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ : ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮೈಸೂರು: ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮದ ಸಂಬoಧ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂಬoಧ ವಾಹನ ನಿಲುಗಡೆ ಸೂಕ್ತವಾದ ವ್ಯವಸ್ಧೆ ಮಾಡಬೇಕು. ಕಾರ್ಯಕ್ರಮದಲ್ಲಿ ವ್ಯವಸ್ಧಿತವಾದ ಆಸನದ ವ್ಯವಸ್ಧೆ, ಊಟದ ವ್ಯವಸ್ಧೆ, ಕುಡಿಯುವ ನೀರಿನ ವ್ಯವಸ್ಧೆ ಸಮರ್ಪಕವಾಗಿ ಮಾಡಬೇಕು ಎಂದು ತಿಳಿಸಿದರು.

ವೇದಿಕೆ ನಿರ್ಮಾಣ, ಮೊಬೈಲ್ ಶೌಚಾಲಯ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಧೆ ಹಾಗೂ ವೈದ್ಯರ ತಂಡ ನಿಯೋಜಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅಶಾದ್ ಉರ್ ರೆಹಮಾನ್ ಶರೀಫ್, ಮೂಡಾ ಆಯುಕ್ತರಾದ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುದರ್ಶನ್ ಎಂ.ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

Leave a Reply

Your email address will not be published. Required fields are marked *