ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸರಸ್ವತಿ ಅಭಿಪ್ರಾಯ
ಚಾಮರಾಜನಗರ. ಆಧ್ಯಾತ್ಮಿಕತೆದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸರಸ್ವತಿ ಅವರು ಅಭಿಪ್ರಾಯಪಟ್ಟರು.
ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಆಷಾಢ ಶುಕ್ರವಾರ ಪ್ರಯುಕ್ತ ಶ್ರೀ ವರಮಹಾಲಕ್ಷ್ಮಿ ಸಂಸ್ಕೃತ ಕ್ರೀಡಾ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯ ಸರ್ಕಾರ ಮಹಿಳೆಯರಿಗೆ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿದೆ. ವಿಶೇಷವಾಗಿ ರಾಜ್ಯದ್ಯಂತ ಸರ್ಕಾರಿ ಸಾರಿಗೆ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಎಂದರು.
ಶ್ರೀ ಚಾಮರಾಜೇಶ್ವರ, ಚಾಮುಂಡೇಶ್ವರಿ, ಕೆಂಪನಂಜಾಂಬ, ದೇವರ ದರ್ಶನ ಮಾಡಲು ಆಗಮಿಸಿದ್ದ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಅರಿಶಿಣ, ಕುಂಕುಮ, ಹೂ, ಬಳೆ, ರವಿಕೆ ವಿತರಿಸಿದರು.
ಶ್ರೀ ವರಮಹಾಲಕ್ಷ್ಮಿ ಸಂಸ್ಕೃತ ಕ್ರೀಡಾ ಸೇವಾ ಸಂಸ್ಥೆ ಅಧ್ಯಕ್ಷ ಜಿ.ಬಂಗಾರು ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಇದೆ ಎಂದ ಅವರು, ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಆಯೂರಾರೋಗ್ಯ ಐಶ್ವರ್ಯ, ಆಯಸ್ಸನ್ನು ಭಗವಂತ ಕರುಣಿಸಲಿ ಎಂದು ಹಾರೈಸಿದರು. ನಂತರ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಯುವಜನ ಕ್ರೀಡಾ ಇಲಾಖೆ ಅಧಿಕಾರಿ ಅನಿತಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಾ, ಡಿ.ಡಿ.ಎಲ್. ಆರ್.ಇಲಾಖೆ ಅಧಿಕಾರಿ ವಿದ್ಯಾಯನಿ ಎಂಬಿ., ದೇವಸ್ಥಾನದ ಅರ್ಚಕ ರಾಮಕೃಷ್ಣ ಭಾರಧ್ವಜ್, ಸಂಸ್ಥೆ ಕಾರ್ಯದರ್ಶಿ ಮಾದಲಾಂಬಿಕೆ, ಶಿಲ್ಪ ಚೇತನ್, ಜ್ಯೋತಿ, ಅಶ್ವಿನಿ, ಸರೋಜಮ್ಮ ಸೇರಿದಂತೆ ಇನ್ನಿತರರಿದ್ದರು.
