ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಗುಂಡ್ಲುಪೇಟೆ ಮತ್ತು ಬೇಗೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಆಗಸ್ಟ್ ೭ ಮತ್ತು ೮ ರಂದು ಹಮ್ಮಿಕೊಂಡಿರುವುದರಿಂದ ಆಯಾ ದಿನದಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಆಗಸ್ಟ್ ೭ರಂದು ಹಿರಿಕಾಟಿ, ನಿಟ್ರೆ, ಬೇಗೂರು, ವಾಟರ್ ಸಪ್ಲೈ, ಹೆಗ್ಗಡಹಳ್ಳಿ, ಮಂಚಳ್ಳಿ ಎನ್.ಜೆ.ವೈ, ಶೆಟ್ಟಹಳ್ಳಿ, ದೇಸಿಪುರ, ಇಂಡಸ್ಟ್ರಿಯಲ್, ಹೊರೆಯಾಲ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಆಗಸ್ಟ್ ೮ರಂದು ಬೊಮ್ಮನಹಳ್ಳಿ, ಕುಂದಗೆರೆ, ಕಟ್ನವಾಡಿ, ದೇಪಾಪುರ, ಎನ್.ಜೆ.ವೈ, ಗೋವಿಂದಪುರ, ಕಗ್ಗಳ, ಕೆಲಸಿಪುರ, ಲಕ್ಕೂರು, ಫ್ಯಾಕ್ಟರಿ, ವಾಟರ್ ಸಪ್ಲೈ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ ೧೯೧೨ ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.