ಜಿಲ್ಲಾ ಉಪ್ಪಾರ ಯುವಕರ ಸಂಘದ ಪ್ರತಿಭಾ ಪುರಸ್ಕಾರ ಸಮಾರಂಭ
ಚಾಮರಾಜನಗರ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕಾದರೆ ಮೊದಲು ನಾನೇನಾಗಬೇಕು ಎಂಬುದರ ಬಗ್ಗೆ ಆಲೋಚನೆ ಮಾಡಬೇಕು ಎಂದು ಕೇಂದ್ರ ಆದಾಯ ತೆರಿಗೆ ಇಲಾಖೆ ನಿರ್ದೇಶಕ ಲಕ್ಕಪ್ಪ ಹನುಮಣ್ಣನವರ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜಿಲ್ಲಾ ಉಪ್ಪಾರ ಯುವಕರ ಸಂಘದ ವತಿಯಿಂದ ನಡೆದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿಯಲ್ಲಿ ಶೇ ೮೦ ಕ್ಕಿಂತ ಹೆಚ್ಚಿನ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ನಾನಾ ಗ್ರಾಮಪಂಚಾಯಿತಿಗಳ ನೂತನ ಅಧ್ಯಕ್ಷ. ಉಪಾಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭವನ್ನು ಗಿಡಕ್ಕೇ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಐಎಎಸ್, ಐಪಿಎಸ್, ಸಿಎ, ಉಪನ್ಯಾಸಕ ವೃತ್ತಿಯ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದಾಗ ಅದಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಓದಿಮನನ ಮಾಡಿಕೊಳ್ಳಬೇಕು, ವೃತ್ತ ಪತ್ರಿಕೆಗಳನ್ನು ಓದುವ ಅಭ್ಯಾಸಮಾಡಿಕೊಳ್ಳಬೇಕು, ಮೊಬೈಲ್ ಬಳಕೆಗೆ ಆದಷ್ಟು ಕಡಿವಾಣ ಹಾಕಬೇಕು ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಚಾಮರಾಜನಗರ ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಚಿಕ್ಕರಾಜಶೆಟ್ಟಿ ಮಾತನಾಡಿ,” ಬಹುತೇಕ ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡುವ ಇಚ್ಚೆ ಹೊಂದಿರುತ್ತಾರೆ. ಇದರ ಬದಲೂ ಅವರಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಕಾರ್ಯ ಪೋಷಕರಿಂದ ಆಗಬೇಕು ಎಂದರು.
ಪ್ರತಿಭಾ ಪುರಸ್ಕಾರ : ಉಪ್ಪಾರ ಸಮುದಾಯ 18 ವಿದ್ಯಾರ್ಧಿಗಳಿಗೆ ನಗದು ಬಹುಮಾನ, ಪ್ರಮಾಣಪತ್ರ ನೀಡಿ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಸಮುದಾಯದ ಗ್ರಾ.ಪಂ.ನೂತನ ಅಧ್ಯಕ್ಷ, ಉಪಾಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.
ಐಟಿಐ ಕಾಲೇಜು ಪ್ರಾಂಶುಪಾಲ ರಂಗಸ್ವಾಮಿ ಅಧ್ತಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಕೆಇಬಿ ಲೆಕ್ಕಾಧಿಕಾರಿ ಮಹೇಶ್, ಡೈರಿ ಅಧ್ಗಕ್ಷ ಕೋಡಿಮೋಳೆ ಗೋವಿಂದಶೆಟ್ಟಿ, ಸಂಘದ ಅಧ್ಯಕ್ಷ ಜಯಕುಮಾರ್, ಪ್ರಧಾ ನ ಕಾರ್ಯದರ್ಶಿ ಸಿ.ಎಸ್.ನಾಗರಾಜು, ಉಪಾಧ್ಯಕ್ಷ ಬಿ.ಸ್ವಾಮಿ, ರವಿಭಗೀರಥ, ಜಯಸಿದ್ದ, ಮಹದೇವಸ್ವಾಮಿ, ಶಿವಕುಮಾರ್, ನಿಟ್ರೆ ನಾಗರಾಜು, ಮೇಗಲಹುಂಡಿ ಮಹೇಶ್ ಇತರರು ಹಾಜರಿದ್ದರು.