ಎಚ್.ಎನ್.ರಮೇಶ್ ಗೆ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರಧಾನ

ಮೈಸೂರು: ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದ ಸಿವಿಲ್ ಇಂಜಿನಿಯರ್ ಹೆಚ್.ಎನ್.ರಮೇಶ್ ಅವರಿಗೆ ಕನ್ನಡ ಪ್ರಭ ದಿನಪತ್ರಿಕೆ ಹಾಗೂ ಏಷ್ಯಾ ನೆಟ್ ಸುವರ್ಣ ನ್ಯೂಸ್ ಸುದ್ದಿ ವಾಹಿನಿ ಸಂಸ್ಥೆಯು ಇಂಜಿನಿಯರಿಂಗ್ ಕ್ಷೇತ್ರದಲ್ಲಿನ ಸೇವೆಗಾಗಿ ನೀಡುವ “ಎಮಿನೆಂಟ್ ಇಂಜಿನಿಯರ್” ಪ್ರಶಸ್ತಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಪ್ರಧಾನ ಮಾಡಿ ಅಭಿನಂದಿಸಿದರು.

ಅ. 12ರ ಗುರುವಾರ ಬೆಂಗಳೂರಿನ ದಿ ಲಲಿತ್ ಅಶೋಕ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ
ಎಚ್.ಎನ್.ರಮೇಶ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡಪ್ರಭ ದಿನಪತ್ರಿಕೆ ಹಾಗೂ ಸುವರ್ಣ ನ್ಯೂಸ್ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ರವಿಹೆಗಡೆ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ವಿದ್ಯಾಶಂಕರ್, ಚಲನಚಿತ್ರ ನಟ ನೀನಾಸಂ ಸತೀಶ್, ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್, ಹರದನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಂದಿನಿ ರಮೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *