ಚಾಮರಾಜನಗರ: ೨೦೨೩-೨೪ನೇ ಸಾಲಿನಲ್ಲಿ ಪ್ರಥಮ, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡಲು ಕಾರ್ಮಿಕ ಇಲಖೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ ೨೦೨೩-೨೪ನೇ ಸಾಲಿನಲ್ಲಿ ಪ್ರಥಮ, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ನೀಡಲಾಗುವುದು.
ಚಾಮರಾಜನಗರ ಜಿಲ್ಲಾ ಕಾರ್ಯವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಸೌಲಭ್ಯ ಪಡೆಯಬಹುದು.
ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ ೧೬ ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಅಥವಾ ಆಯಾ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಸಂಪರ್ಕಿಸುವಂತೆ ಜಿಲ್ಲಾ ಕಾರ್ಮಿಕ ಆಧಿಕಾರಿ ಎಂ. ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.