ಕನ್ನಡ ಪರ ಸಂಘಟನೆಗಳಿಂದ ತೆಂಗಿನಕಾಯಿ ಚಿಪ್ಪು ಹಿಡಿದು ಪ್ರತಿಭಟನೆ

ಮಳೆ ಯಲ್ಲೂ  ಕನ್ನಡ ಚಳವಳಿಗಾರರ ಅಕ್ರೋಶ
ಚಾಮರಾಜನಗರ: ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಗರದಲ್ಲಿ ತೆಂಗಿನಕಾಯಿ ಚಿಪ್ಪು,ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ  ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ  ಶಾ.ಮುರಳಿ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ತೆಂಗಿನ ಕಾಯಿ ಚಿಪ್ಪ ಹಿಡಿದು  ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಮಳೆಯ ನಡುವೆಯಲ್ಲಿ  ಕೆಲಕಾಲ ರಸ್ತೆ ತಡೆ ನಡೆಸಿ,   ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು. 

ಕಾವೇರಿ ನೀರು ನಿರ್ವಹಣಾ ಮಂಡಳಿ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ತೆಂಗಿನಕಾಯಿ ಚಿಪ್ಪು ನೀಡಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ ಶಾ.ಮುರಳಿ ಮಾತನಾಡಿ,  ರಾಜ್ಯ ಸರ್ಕಾರವು ತಮಿಳು ಸರ್ಕಾರದ ಒತ್ತಡಕ್ಕೆ ಮಣಿದು  ಕಾವೇರಿನೀರನ್ನು ತಮಿಳುನಾಡಿಗೆ ಬಿಟ್ಟಿರುವುದು ಅತ್ಯಂತ ಖಂಡನೀಯವಾಗಿದೆ.  ಕರ್ನಾಟಕದ ಜನತೆಯ ಹಿತದೃಷ್ಢಿಯಿಂದ  ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ   ಜಿಲ್ಲಾ  ತಮಿಳು ಸಂಘದ ಕಾರ್ಯದರ್ಶಿ    ಜಗದೀಶ ,  ಮುಖಂಡ ವೆಂಕಟಚಲಂ,   ರವಿಚಂದ್ರ ಪ್ರಸಾದ್,  ಕಹಳೆ,  ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು,  ಗು.ಪುರುಷೋತ್ತಮ್,  ಆಟೋ ಮಹದೇವಸ್ವಾಮಿ ಚಾ.ಹ.ರಾಮು, ಲಿಂಗರಾಜು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *