ಕಲ್ಮಡ್ಕ ಪ್ರಭಾಕರ್ ವಿರುದ್ದ ಕ್ರಮಕ್ಕೆ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಒತ್ತಾಯ : ಎಸ್ಪಿಗೆ ಮನವಿ

ಚಾಮರಾಜನಗರ: ಶಾಂತಿ, ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಕೋಮು ಭಾವನೆ ಕೆರಳಿಸುವ ಹಾಗೂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿರುವ ಹಿಂದು ಸಂಘಟನೆಯ ಮುಖಂಡ ಕಲ್ಮಡ್ಕ ಪ್ರಭಾಕರ್ ವಿರುದ್ದ ಸೂಕ್ರ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಅಫ್ಜಲ್ ಷರೀಪ್ ಮನವಿ ಮಾಡಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರನ್ನು ಭೇಟಿ ಮಾಡಿದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಫ್ಜಲ್ ಷರೀಪ್, ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಜೊತೆಗೆ ಕೋಮು ಪ್ರಚೋದನೆ ಭಾಷಣ ಮಾಡುವ ಮೂಲಕ ಪ್ರಭಾಕರ್ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದು, ಇವರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಪ್ರಭಾಕರ್ ಅವರು ಮಹಿಳೆಯರನ್ನು ಎರಡನೇ ದರ್ಜೆ ಪ್ರಜೆಗಳಂತೆ ನೋಡುತ್ತಿದ್ದು, ಕೇವಲ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ ಕಾರಿ ಹೇಳಿಕೆ ನೀಡಿದ್ದು, ಇಡೀ ಮಹಿಳೆಯರಿಗೆ ಮಾಡಿದ ಅಪಮಾನವಾಗಿದೆ. ಸ್ತ್ರೀಯರನ್ನು ನಾವು ಪೂಜ್ಯನೀಯ ಭಾವನೆಯಲ್ಲಿ ಕಾಣುತ್ತಿದ್ದೇವೆ ಎನ್ನುವ ಪ್ರಭಾಕರ್ ಮುಸ್ಲಿಂ ಮಹಿಳೆ ಎಂದಾಕ್ಷಣ ಇಂಥ ಹೇಳಿಕೆ ನೀಡಿರುವುದು ಅವರ ಸಣ್ಣತನ ಹಾಗೂ ನಿಜ ಮನಸ್ಥಿತಿಯನ್ನು ತೋರ್ಪಡಿಸುತ್ತದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ. ಇವರ ವಿರುದ್ದ ಈಗಾಗಲೇ ಪಟ್ಟಣ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್ಪಿ ಅವರಿಗೆ ದೂರು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಇಮ್ರಾನ್ ಅಹಮದ್, ಅಪ್ಸರ್ ಅಹಮದ್, ಸೈಯದ್ ಇರ್ಷಾದ್ ಇತರರು ಇದ್ದಾರೆ.

Leave a Reply

Your email address will not be published. Required fields are marked *