ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಛತ್ರಿ ಚಳವಳಿ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಛತ್ರಿ ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ..ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ ಇಂದಿಗೆ 34 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು. ಇಂದು ಕೂಡ ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ಛತ್ರ ಆಟ ಆಡುತ್ತೆ ಎಂದು ಛತ್ರಿ ಹಿಡಿದು ಪ್ರದರ್ಶಿಸುವ ಪ್ರತಿಭಟನೆ ಮಾಡಲಾಗಿದೆ ಎಂದರು
ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇ ಕಾವೇರಿ ನೀರಿನ ವಿಚಾರದಲ್ಲಿ ಕ್ಯಾತೆ ತೆಗೆದು ತನ್ನು ತೀಟೆಯನ್ಬು ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನುನಿಲ್ಲಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜದ್ವನಿಗೋವಿಂದರಾಜು, ಗು.ಪುರುಷೋತ್ತಮ್, ರಾಜಪ್ಪ, ತಾಂಡವಮೂರ್ತಿ,, ವೀರಭದ್ರ, ಸೋಮವಾರಪೇಟೆ ಮಂಜು ,ರಮೇಶ್, ದೊಡ್ಡರಾಯಪೇಟೆ ನಾಗೇಂದ್ರ ಪರ್ವತ್ ರಾಜ್, ಚಾ.ಸಿ.ಸಿದ್ದರಾಜು, ಹೊಮ್ಮ ಲೋಕೇಶ್, ಇತರರು ಭಾಗವಹಿಸಿದ್ದರು.