ಯಳಂದೂರು: ತಾಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಕೊಳ್ಳೇಗಾಲ ತಾಲೂಕಿನ ಕುಂತೂರು ಗುಡ್ಡದ ಬಳಿ ಮಂಗಳವಾರ ರಾತ್ರಿ ಚಿರತೆ ಬೋನಿನಲ್ಲಿ ಬಂಧಿಯಾಗಿದೆ.
ಇತ್ತೀಚೆಗೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿಯಲ್ಲಿ ಬಾಲಕನೊರ್ವನ ಮೇಲೆ ದಾಳಿ ಮಾಡಿದ್ದ ಚಿರತೆ ಅಕ್ಕಪಕ್ಕದ ಹಳ್ಳಿಗಳಲ್ಲೂ ಆತಂಕ ಸೃಷ್ಟಿಸಿತ್ತು. ಜನರು ಭಯದಿಂದಲೇ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅರಣ್ಯ ಇಲಾಖೆ ಹಲವು ಕಡೆ ಬೋನುಗಳನ್ನು ಇಟ್ಟಿದ್ದರು.
ನಿನ್ನೆ ರಾತ್ರಿ ಕುಂತೂರು ಗುಡ್ಡದ ಬಳಿ ಇರಿಸಲಾಗಿದ್ದ ಬೋನಿನಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.