ಚಾಮರಾಜನಗರ: ೨೦೨೩ನೇ ಸಾಲಿನ ಗೌರಿ ಗಣೇಶೋತ್ಸವ ಆಯೋಜನೆ, ಪ್ರತಿ?ಪನೆ, ವಿವಿಧ ಕಾರ್ಯಕ್ರಮಗಳ ಆಯೋಜನೆ, ಉತ್ಸವ, ವಿಸರ್ಜನಾ ಮೆರವಣಿಗೆ ಕಾರ್ಯಗಳಿಗಾಗಿ ಆಯೋಜಕರಿಗೆ ಅನುಮತಿ, ಪರವಾನಗಿ ನೀಡಲು ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ವಿವಿಧ ಅಧಿಕಾರಿಗಳನ್ನೊಳಗೊಂಡ ಏಕಗವಾಕ್ಷಿ ಸಮಿತಿ ರಚಿಸಿ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಗಣೇಶ ಮೂರ್ತಿಯನ್ನು ಪ್ರತಿ?ಪಿಸುವ ಸಂದರ್ಭದಲ್ಲಿ ಉತ್ಸವವನ್ನು ಆಯೋಜಿಸುವ ಆಯೋಜಕರಿಗೆ ಪರವಾನಿಗೆ ನೀಡುವುದು, ಗಣೇಶ ಪ್ರತಿ?ಪನೆ ಮಾಡುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ಕಾರ್ಯಕ್ರಮಗಳನ್ನು ನಡೆಸುವ ಪರವಾನಗಿ ನೀಡಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಏಕಗವಾಕ್ಷಿ ಸಮಿತಿ ರಚಿಸಲಾಗಿದೆ.
ತಹಶೀಲ್ದಾರ್ ಸಮಿತಿಯ ಅಧ್ಯಕ್ಷರಾಗಿದ್ದು, ನಗರಸಭೆ ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯತ್, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಇಲಾಖೆ ವೃತ್ತ ನಿರೀಕ್ಷಕರು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹಾಗೂ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಾಲ್ಲೂಕು ಅಗ್ನಿಶಾಮಕ ಠಾಣಾಧಿಕಾರಿಗಳು ಸಮಿತಿಯ ಸದಸ್ಯರಾಗಿದ್ದಾರೆ.
ಸಮಿತಿಯು ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಸಂಬಂಧ ಸ್ವೀಕೃತವಾಗುವ ಅರ್ಜಿಗಳನ್ನು ಪರಿಶೀಲಿಸಿ ?ರತ್ತುಗಳನ್ನು ವಿಧಿಸಿ ನಿಯಮಾನುಸಾರ ಅನುಮತಿ ನೀಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸೂಚಿಸಿದ್ದಾರೆ.