ಚಾಮರಾಜನಗರ: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನಾಗಿ ಗೌರವಧನ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಚಾಮರಾಜನಗರ ತಾಲೂಕಿನ ನವಿಲೂರು ಮತ್ತು ಚಂದಕವಾಡಿ ಗ್ರಾಮ ಪಂಚಾಯಿತಿ, ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ, ಹುಂಡೀಪುರ, ಬನ್ನಿತಾಳಪುರ, ಕನ್ನೇಗಾಲ ಹಾಗೂ ಹನೂರು ತಾಲೂಕಿನ ಕೌದಳ್ಳಿ, ಶೆಟ್ಟಹಳ್ಳಿ, ಪಿಜಿ ಪಾಳ್ಯ, ಚಿಕ್ಕಮಾಲಪುರ ಮತ್ತು ಹುತ್ತೂರು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿದಾರರು ಸಮರ್ಥ ವಿಕಲಚೇತನರಾಗಿಬೇಕು ತೀವ್ರತರ ವಿಕಲಚೇತನರಾಗಿರಬಾರದು. 18 ರಿಂದ 45ರ ವಯೋಮಿಯಲ್ಲಿದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ, ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು. ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿದವರು ಸಿಗದೆ ಇದ್ದಲ್ಲಿ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು. ಅಂಗವಿಕಲತೆಯು ಶೇ. 40ಕ್ಕಿಂತ ಹೆಚ್ಚು ಹಾಗೂ 75ಕ್ಕಿಂತ ಕಡಿಮೆ ಇರಬೇಕು. ಯುಡಿಐಡಿ ಕಾರ್ಡ್ ಲಗತ್ತಿಸಬೇಕು. ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸಬೇಕು. ಮಾಹೆಯಾನ 9 ಸಾವಿರ ರೂ. ಗೌರವಧನ ನೀಡಲಾಗುವುದು.
ಆಸಕ್ತ ವಿಕಲಚೇತನರು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿ ಎಂಆರ್ಡಬ್ಲೂ ಇವರಿಗೆ ನವೆಂಬರ್ 30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.