ಚಾಮರಾಜನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀಜಿಯವರ ವಿಚಾರಧಾರೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇಂದು ನಗದು ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಯಿತು.

ಪ್ರೌಢಶಾಲಾ ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರತಿ ವಿಭಾಗದಲ್ಲಿ ಮೂವರು ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ 3 ಸಾವಿರ ರೂ, ದ್ವಿತೀಯ ಬಹುಮಾನವಾಗಿ 2 ಸಾವಿರ ರೂ ಹಾಗೂ ತೃತೀಯ ಬಹುಮಾನವಾಗಿ 1 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಇಂದು ನಗರದ ಗಾಂಧಿ ಭವನದ ಅವರಣದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಶಾಸಕರು, ಗಣ್ಯರು, ಸರ್ವಧರ್ಮ ಗುರುಗಳು, ಅಧಿಕಾರಿಗಳು ವಿತರಿಸಿದರು.
ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಹನೂರು ತಾಲೂಕಿನ ಗೌತಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹರ್ಷಿತ. ಆರ್, ದ್ವಿತೀಯ ಸ್ಥಾನ ಪಡೆದ ಯಳಂದೂರು ತಾಲೂಕು ಕೆಸ್ತೂರಿನ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅರ್ಚನಾ. ಎನ್. ಹಾಗೂ ತೃತೀಯ ಸ್ಥಾನ ಪಡೆದ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಶುಭ .ಎಂ. ಅವರು ಬಹುಮಾನ ಸ್ವೀಕರಿಸಿದರು.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಗುಂಡ್ಲುಪೇಟೆ ತಾಲೂಕು ಬೇಗೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ (ಪಿ.ಸಿ.ಎಂ.ಬಿ) ವಿದ್ಯಾರ್ಥಿನಿ ಮೌಲ್ಯ ಬಿ.ಸಿ., ದ್ವಿತೀಯ ಸ್ಥಾನ ಪಡೆದ ಯಳಂದೂರಿನ ಜೆ.ಎಸ್.ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ (ಕಲಾ ವಿಭಾಗ) ವಿದ್ಯಾರ್ಥಿನಿ ಸುಮಾ ಹಾಗೂ ತೃತೀಯ ಸ್ಥಾನ ಪಡೆದ ಚಾಮರಾಜನಗರ ತಾಲೂಕಿನ ಅಮಚವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ (ವಾಣಿಜ್ಯ ವಿಭಾಗ) ವಿದ್ಯಾರ್ಥಿನಿ ದೇವಿರಮ್ಮ ಅವರು ಬಹುಮಾನ ಪಡೆದುಕೊಂಡರು.
ಪದವಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಚಾಮರಾಜನಗರದ ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ವರ್ಷದ ಶಿಕ್ಷಣಾರ್ಥಿ ಕೆಂಪರಾಜು ಕೆ.ಜಿ., ದ್ವಿತೀಯ ಸ್ಥಾನ ಪಡೆದ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯ ಶ್ರೀ ಮದ್ದಾನೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಸುಲೋಚನ. ಎಂ. ಹಾಗೂ ತೃತೀಯ ಸ್ಥಾನ ಪಡೆದ ಚಾಮರಾಜನಗರದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿ ಜ್ಞಾನೇಂದ್ರ ಮೆಘಾವತ್ ಅವರುಗಳು ಬಹುಮಾನ ಸ್ವೀಕರಿಸಿದರು.