ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ ಹಾಗು ವಿಶ್ವ ಮಾನವ, ಶೋಷಿತ ಸಮಾಜದ ಧ್ವನಿಯಾಗಿ ವಿಶ್ವಕ್ಕೆ ಮೆಚ್ಚುವಾದ ಮಾದರಿ ಸಂವಿಧಾನವನ್ನ ನೀಡಿದ ಪಿತಾಮಹ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಬಣ್ಣಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ಯಲ್ಲಿ ಇಂದು ಅಂತರರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಗೂ ಸಂವಿಧಾನ ಪೀಠಿಕೆಗೆ ಪುಷ್ಪಾರ್ಚಣೆ ಮಾಡಿದ ಸಂವಿಧಾನ ಪೀಠಿಕೆಯನ್ನು ಭೋದಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲರು ಮೆಚ್ಚುವಂತ ಅಭಿವೃದ್ದಿ ಪರವಾದ ಸಂವಿಧಾನವನ್ನು ರಚನೆ ಮಾಡಿಕೊಟ್ಟ ಅಂಬೇಡ್ಕರ್ ಅವರು ದೇಶದ ಅಭಿವೃದ್ದಿಗೆ ಭದ್ರತಾ ಬುನಾದಿಯನ್ನು ಹಾಕಿಕೊಟ್ಟಿದ್ದಾರೆ. ಇಂದು ಸೆ. ೧೫ ಅಂತರರಾಷ್ಟೀಯ ಪ್ರಜಾ ಪ್ರಭುತ್ವ ದಿನವನ್ನಾಗಿ ರಾಷ್ಟ್ರಾದ್ಯಂತ ಅಚರಣೆ ಮಾಡಲಾಗುತ್ತಿದೆ. ಆದರೆ ರೀತಿ ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ವಿಧಾನ ಸೌಧದ ಮುಂಭಾಗ ಸಂವಿಧಾನ ಪೀಠಿಕೆಯನ್ನು ಓದಿ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ವ ಶೇಷ್ಟ ಸಂವಿಧಾನವನ್ನು ಎಲ್ಲರು ಸಹ ಸಂಭ್ರಮಿಸುವ ಮತ್ತು ಅದನ್ನು ಜಾರಿ ಮಾಡುವ ಮೂಲಕ ಸಮಾನತೆ, ಭ್ರಾತೃತ್ವ, ಸಹಬಾಳ್ವೆಯಿಂದ ಬಾಳೋಣ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ. ಕೆ. ರವಿಕುಮಾರ್ ಮಾತನಾಡಿ, ಅಂತರರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನವನ್ನು ರಾಜ್ಯದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಸರ್ಕಾರಿ ಕಚೇರಿಗಳು, ಶಾಲೆ ಕಾಲೇಜು ಸೇರಿದಂತೆ ಎಲ್ಲಾ ಕಡೆಯು ಸಹ ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆಗ ಗೌರವ ವನ್ನು ಹೆಚ್ಚಿಸುವ ಜೊತೆಗೆ ಸಂವಿಧಾನ ಆಶಯವನ್ನು ಎಲ್ಲರು ಅರಿವು ಮುನ್ನಡೆಯೋಣ ಎಂಬ ಸಂದೇಶವನ್ನು ವಿಶ್ವಕ್ಕೆ ನೀಡುವ ಕಾರ್ಯಕ್ರಮ ಇದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್, ಎಸ್ಸಿ ಘಟಕದ ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಫ್ಜರ್ ಷರೀಪ್, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿ ಖಾನ್, ಮುಖಂಡರಾದ ನಾಗವಳ್ಳಿ ನಾಗಯ್ಯ, ಶಿವಮೂರ್ತಿ, ಕಾಗವಲವಾಡಿ ಚಂದ್ರು, ತಾ.ಪಂ. ಮಾಜಿ ಸದಸ್ಯರಾದ ಎಸ್.ರಾಜು, ಶಿವಸ್ವಾಮಿ, ಮಹದೇವಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಎಸ್. ಸೋಮನಾಯಕ, ಅರುಣ್ಕುಮಾರ್, ಅಯುಬ್ ಖಾನ್, ಸೋಮಣ್ಣ, ಎಪಿಎಂಸಿ ನಿರ್ದೇಶಕ ಸೋಮೇಶ್, ಎನ್.ಆರ್. ಪುರುಷೋತ್ತಮ್, ಮುತ್ತಿಗೆ ದೊರೆ, ಪುಟ್ಟಸ್ವಾಮಿ, ಮಹದೇವ್, ಶಕುಂತಲಾ, ಜಗದೀಶ್, ಪ್ರಥ್ವಿ ಮೊದಲಾದವರು ಇದ್ದರು.