ಜಿಲ್ಲೆಯ ಅಗ್ನಿಶಾಮಕದಳದ ಐವರು ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಚಾಮರಾಜನಗರ: ನಾಗರಿಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ಸಲ್ಲಿಸಿರುವ ಅತ್ಯುನ್ನತ ಸೇವೆ ಹಾಗೂ ಉತ್ತಮ ಕಾರ್ಯ ನಿರ್ವಹಣೆ ಪುರಸ್ಕರಿಸಿ ನೀಡಲಾಗುವ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯವರ ಚಿನ್ನದ ಪದಕಕ್ಕೆ ಚಾಮರಾಜನಗರ ಜಿಲ್ಲೆಯ ಐವರು ಅಧಿಕಾರಿ ಹಾಗೂ ಸಿಬ್ಬಂದಿ ಪಾತ್ರರಾಗಿದ್ದಾರೆ.

2022ನೇ ಸಾಲಿನ ಚಿನ್ನದ ಪದಕಕ್ಕೆ ಚಾಮರಾಜನಗರ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸಿ.ಆರ್. ರಂಗನಾಥ್, ಗುಂಡ್ಲುಪೇಟೆಯ ಅಗ್ನಿಶಾಮಕ ಠಾಣೆಯ ಪ್ರಭಾರ ಪ್ರಮುಖ ಅಗ್ನಿಶಾಮಕರಾದ ಹೆಚ್.ಎನ್. ಹನುಮಂತಯ್ಯ ಆಯ್ಕೆಯಾಗಿದ್ದಾರೆ.

2023ನೇ ಸಾಲಿನ ಚಿನ್ನದ ಪದಕಕ್ಕೆ ಚಾಮರಾಜನಗರ ಜಿಲ್ಲಾ ಅಗ್ನಿಶಾಮಕ ಠಾಣೆಯ ಪ್ರಭಾರ ಅಗ್ನಿಶಾಮಕ ಅಧಿಕಾರಿ ಶಿವಾಜಿ ರಾವ್ ಪವರ್, ಅಗ್ನಿ ಶಾಮಕರಾದ ಎ. ಮನೋಹರ್, ಕೊಳ್ಳೇಗಾಲ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕರಾದ ಚೆನ್ನಪ್ಪಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಚಿನ್ನದ ಪದಕಕ್ಕೆ ಪುರಸ್ಕøತರಾಗಿರುವ ಅಗ್ನಿಶಾಮಕ ಅಧಿಕಾರಿ ಹಾಗೂ ಸಿಬ್ಬಂದಿ ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪದಕ ಪ್ರಧಾನ ಸಮಾರಂಭದಲ್ಲಿ ಚಿನ್ನದ ಪದಕಗಳನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *