ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಸೋಮವಾರಪೇಟೆ ಮತ್ತು ರಾಮಸಮುದ್ರ ಫೀಡರ್ ಗಳಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ಜುಲೈ ೩೦ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ನಗರವೂ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಚಾಮರಾಜನಗರ ಪಟ್ಟಣ, ರಾಮಸಮುದ್ರ, ಹೌಸಿಂಗ್ ಬೋರ್ಡ್, ನ್ಯಾಯಾಲಯ ಸುತ್ತಮುತ್ತಲ ಪ್ರದೇಶ ಮತ್ತು ಉತ್ತುವಳ್ಳಿ ಕೈಗಾರಿಕಾ ಪ್ರದೇಶ, ಯಡಪುರ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಕಾಲೇಜು, ಗಾಳಿಪುರ, ಸತ್ತಿ ರಸ್ತೆ, ಸೋಮವಾರ ಪೇಟೆ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.