ಜೆಎಸ್‍ಎಸ್ ಕಾಲೇಜಿನಲ್ಲಿ ಶಸಾಪ ಕೆ.ಪಿ. ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ ಹಾಗೂ ಕೆ.ಸಿ. ಶಿವಪ್ಪ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ

ಕೆ.ಪಿ. ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿಗೆ ವಿ. ವೀರಪ್ಪ ; ಕೆ.ಸಿ. ಶಿವಪ್ಪ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ಎನ್. ರಾಜೇಶ್ವರಿ ಆಯ್ಕೆ
ಚಾಮರಾಜನಗರ: ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಚಾ.ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಡಿ. 27ರ ಬುಧವಾರ ಕೆ.ಸಿ. ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ ಮತ್ತು ಕೆ.ಸಿ. ಶಿವಪ್ಪ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ-2023 ನಗರದಲ್ಲಿ ಆಯೋಜನೆ ಮಾಡಲಾಗಿದೆ.

ನಗರದ ಜೆಎಸ್‍ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಸಾಯಂಕಾಲ 5.30ಕ್ಕೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪ್ರಾಧ್ಯಾಪಕ ಪೆÇ್ರ. ಸಿ. ನಾಗಣ್ಣ ವಹಿಸುವವರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ.
ದತ್ತಿ ಪ್ರಾಯೋಜಕರು, ನಾಡಿನ ಹಿರಿಯ ಸಾಹಿತಿ ಕೆ.ಸಿ.ಶಿವಪ್ಪ, ಜಿಲ್ಲಾ ಶಸಾಪ ಅಧ್ಯಕ್ಷ ದುಗ್ಗಹಟ್ಟಿ ವಿ. ಮಲ್ಲಿಕಾರ್ಜುನಸ್ವಾಮಿ ಉಪಸ್ಥಿತರಿರುತ್ತಾರೆ.

ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಶರಣ ಸಾಹಿತ್ಯ ಪರಿಷತ್‍ನ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಶರಣ ಸಾಹಿತ್ಯ ಪರಿಷತ್‍ನ ಪ್ರಧಾನ ಕಾರ್ಯದರ್ಶಿ ಬಿ.ಕೆ. ರವಿಕುಮಾರ್, ಕಾರ್ಯದರ್ಶಿಗಳಾದ ಬಿ.ಎಸ್. ವಿನಯ್, ನಾಗರಾಜು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿ.ವೀರಪ್ಪ (ಕೆ.ಪಿ.ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ ಪುರಸ್ಕøತರು)

ಶ್ರೀ ವಿ.ವೀರಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವಿಶೇಷ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಹಾಲಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬಸಪ್ಪನದೊಡ್ಡಿ, ಹನೂರು ತಾ. ಚಾಮರಾಜನಗರ ಜಿಲ್ಲೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ವಿಶೇಷ ಕಾಳಜಿ ವಹಿಸಿದ್ದಾರೆ. ಗಡಿನಾಡಿನ ಭಾಗದಲ್ಲಿ ಶಿಕ್ಷಣವನ್ನು ಪ್ರಚುರಪಡಿಸುವಲ್ಲಿ ಪ್ರಗತಿ ಸಾಧಿಸಿರುತ್ತಾರೆ. ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಉತ್ತಮ ಶಾಲಾ ವಾತಾವರಣವನ್ನು ರೂಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.
ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಶೌಚಾಲಯಗಳ ನಿರ್ಮಾಣ ಹಾಗೂ ವಿದ್ಯಾರ್ಥಿನಿಯರಿಗೆ ಅಗತ್ಯ ಸೌಲಭ್ಯಗಳನ್ನು ಪೂರೈಸುವಲ್ಲಿ ಹೆಚ್ಚಿನ ಗಮನವಹಿಸಿದ್ದಾರೆ. ಮೂರು ದಶಕಗಳ ಇವರ ಅನುಪಮ ಸೇವೆಯನ್ನು ಪರಿಗಣಿಸಿ ಇವರಿಗೆ ಕೆ.ಪಿ ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಕು. ಎನ್. ರಾಜೇಶ್ವರಿ (ಕೆ.ಸಿ.ಶಿವಪ್ಪ ಪ್ರತಿಭಾ ಪುರಸ್ಕಾರ)

ಶ್ರೀ ನಾಗರಾಜು ಹಾಗೂ ಶ್ರೀಮತಿ ವಿದ್ಯಾಮಣಿ ಇವರ ಸುಪುತ್ರಿಯಾದ ಕು.ರಾಜೇಶ್ವರಿ ಎನ್ ಇವರು ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಪಿಜಿ ಪಾಳ್ಯದ ನಿರ್ಮಲ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡಿ ಈಗ ಪ್ರಥಮ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಭಾμÉ ಕನ್ನಡದಲ್ಲಿ 125 ಕ್ಕೆ 125 ಅಂಕಗಳನ್ನು ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿರುತ್ತಾರೆ. ಅಲ್ಲದೇ ಒಟ್ಟು 594 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೂ ಹೆತ್ತವರಿಗೂ ಕೀರ್ತಿ ತಂದಿರುತ್ತಾರೆ. ಇವರಿಗೆ ಕೆ.ಸಿ.ಶಿವಪ್ಪ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತದೆ.

Leave a Reply

Your email address will not be published. Required fields are marked *