ಟೋಪಿ ಪ್ರದರ್ಶಿಸಿ ವಿನೂತನ ಪ್ರತಿಭಟನೆ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯಿಂದ ನಗರದಲ್ಲಿ ಮಂಗಳವಾರ ಟೋಫಿ ಹಿಡಿದು ಪ್ರದರ್ಶಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಜಿ¯್ಲÁ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಾ.ಮುರಳಿ ಅವರ ನೇತೃತದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆz್ದÁರಿಯಲ್ಲಿ ಟೋಪಿ ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಗು.ಪುರುಷೋತ್ತಮ್, ಮಹೇಶ್ ಗೌಡ, ಚಾ.ಹ.ರಾಮು, ಚಾ.ಸಿ.ಸಿರಾಜು, ವೀರಭದ್ರ, ತಾಂಡವಮೂರ್ತಿ, ಲಿಂಗರಾಜು, ರಾಚಪ್ಪ, ಪ್ರಕಾಶ್ ಇತರರು ಭಾಗವಹಿಸಿರು.

Leave a Reply

Your email address will not be published. Required fields are marked *