ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ೨೦೨೩-೨೪ನೇ ಸಾಲಿನ ಮಹಾರಾಷ್ಟçದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ರವರ ದೀಕ್ಷಾಭೂಮಿ ಯಾತ್ರೆ ಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ, ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾಲಾರ್ಪಣೆ ಮಾಡಿ ಬೀಳ್ಕೊಟ್ಟು ಶುಭ ಕೋರಿದರು.
ಬಳಿಕ ಮಾತನಾಡಿದ ಶಾಸಕರು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಡಾ.ಬಿ.ಆರ್.ಅಂಬೇಡ್ಕರ್ ಅವರು ದೀಕ್ಷಾ ಪಡೆದಂತಹ ಮಹಾರಾಷ್ಟ್ರದ ನಾಗಪುರದ ದೀಕ್ಷಾ ಭೂಮಿ ಯಾತ್ರೆ ಹಮ್ಮಿಕೊಂಡಿದ್ದು ಸರ್ಕಾರ, ಸಚಿವರು 356 ಯಾತ್ರೆಗಳಿಗೆ ಅವಕಾಶ ಕಲ್ಪಿಸಿದ್ದು, ಎಲ್ಲಾ ಯಾತ್ರೆಗಳು ಕೆಎಸ್ಆರ್ಟಿಸಿ ಐರಾವತ್ ಬಸ್ ನಲ್ಲಿ ತೆರಳುತ್ತಿರುವ ಎಲ್ಲಾ ಯಾತ್ರಿಗಳಿಗೆ ಶುಭವಾಗಲಿ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳನ್ನು ಅಳವಡಿಸಿಕೊಂಡು ಅವರ ಹಾದಿಯಲ್ಲಿ ಸಾಗಲಿ ಎಂದರು.
ಇದನ್ನೂ ಮೊದಲು ಯಾತ್ರೆಗಳು ಅಂಬೇಡ್ಕರ್ ಪುತ್ಥಳಿ ಬಳಿಯಲ್ಲಿ ಸಾಮೂಹಿಕ ವಂದನೆ ಸಲ್ಲಿಸಿ ಜಿಲ್ಲಾಡಳಿತ ಭವನದಿಂದ ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಭುವನೇಶ್ವರಿ ವೃತ್ತದ ಕಡೆಯಿಂದ ವಾಪಸ್ ಜಿಲ್ಲಾಡಳಿತ ಭವನದರಗೆ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ , ಸಹಾಯಕ ನಿದೇಶಕ ಚಿಕ್ಕಬಸವಯ್ಯ, ನಗರಸಭಾ ಸದಸ್ಯರಾದ ರಾಜಪ್ಪ, ಎಂ.ಮಹೇಶ್, ದಲಿತ ಸಂಘರ್ಷ ಸಮಿತಿ ಡಿ.ಜಿ. ಸಾಗರ್ ಬಣದ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ, ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು, ಸಿ.ಎಂ.ಕೃಷ್ಣಮೂರ್ತಿ, ಚಿಕ್ಕಮಹದೇವು, ಕಾಗಲವಾಡಿಚಂದ್ರು ಇತರರು ಹಾಜರಿದ್ದರು.