ಚಾಮರಾಜನಗರ: ಬ್ರಿಟೀಷರ ದಾಸ್ಯದಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಅವರು ನಗರದ ಸಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ೭೭ ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಇಂದು ದೇಶಾದ್ಯಂತ ಸಡಗರ-ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ಹಲವು ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ,ಬಲಿದಾನದ ಪ್ರತೀಕವೇ ಇಂದಿನ ಸ್ವತಂತ್ರವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ, ನೆಹರು, ಸಂಗೊಳ್ಳಿ ರಾಯಣ್ಣ ಸೇರಿದಂತೆ ಹಲವು ಮಹಾನ್ ಮುಂಚೂಣಿ ನಾಯಕರು ನೇತೃತ್ವ ವಹಿಸಿ ಭಾರತೀಯರನ್ನು ಒಂದುಗೂಡಿಸಿ ಸ್ವಾತಂತ್ರ್ಯ ತಂದುಕೊಟ್ಟ ಬಗೆಯನ್ನು ಶಾಸಕರು ಸವಿಸ್ತಾರವಾಗಿವಿವರಿಸಿದರು.
ಇಂದು ಭಾರತ ದೇಶವು ವಿಜ್ಞಾನ ಹಾಗೂ ತಂತ್ರಜ್ನಾನ ಕ್ಷೇತ್ರದಲ್ಲಿ ಅದ್ವಿತಿಯ ಸಾಧನೆ ಮಾಡಿದ್ದು,ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸುತ್ತಿದೆ,ದೇಶದ ಪ್ರಗತಿಗೆ ಪ್ರತಿಯೊಬ್ಬರು ಕಂಕಣಬದ್ದರಾಗಿ ದುಡಿಯುವ ಮನೋಭಾವನೆಯನ್ನು ವಿದ್ಯಾರ್ಥಿಗಳು ಈಗಿನಿಂದಲೇ ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ತದ ನಂತರ ಶಾಸಕರು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಣ್ಣ, ಉಪನ್ಯಾಸಕರಾದ ರಾಮಕೃಷ್ಣ, ಮಾದಪ್ಪ, ಮಧು, ಕವಿತಾ, ಜಯಶ್ರೀ,ಶೀಲಾ,ಮಹದೇವಸ್ವಾಮಿ,ಸುನಿಲ್ ಶಕ್ತಿದಾಸ್,ಕೃಷ್ಣಮೂರ್ತಿ,ಸಿ.ಬಿ.ಸಿ ಸಮಿತಿ ಉಪಾಧ್ಯಕ್ಷ ಕರೀಮುಲ್ಲಾ ಖಾನ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಉಪನ್ಯಾಸಕರಾದ ಮಹದೇವಸ್ವಾಮಿ, ನಿಂಗೇಗೌಡ, ಪ್ರಭಾರ ಪ್ರಾಂಶುಪಾಲೆ ನಿರ್ಮಲಾ, ನಂಜುಂಡಸ್ವಾಮಿ ,ಎಸ್ ಡಿಎಂಸಿ ಅಧ್ಯಕ್ಷ ಕವಿತಾ ಸೇರಿದಂತೆ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರು,ವಿದ್ಯಾರ್ಥಿಗಳು ಹಾಜರಿದ್ದರು.
