ನಗರದಲ್ಲಿ ಅಪ್ಪು ಪುಣ್ಯಸ್ಮರಣೆ

ಚಾಮರಾಜನಗರ: ನಗರದ ಶ್ರೀವೆಂಕಟೇಶ್ವರ ಹಿಂದೂ ಮಿಲಿಟರಿ ಹೋಟಲ್, ವೆಂಕಟೇಶ್ವರ ಫ್ಯಾಷನ್ ವತಿಯಿಂದ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 2 ನೇ ವರ್ಷ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಷಾರ್ಚನೆ ಮಾಡಿ ಅನ್ಮಸಂತರ್ಪಣೆ ಮಾಡಲಾಯಿತು.

ಪುಷ್ಷಾರ್ಚನೆ ಮಾಡಿದ ಹೋಟಲ್ ಮಾಲೀಕ ಶ್ರೀನಿವಾಸ ಮಾತನಾಡಿ, ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾಕ್ಟರ್ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು.ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು. ನಮ್ಮ ಪ್ರೀತಿಯ ಅಪ್ಪು ಮತ್ತೆ ಹುಟ್ಟಿ ಬರಲಿ ಎಂದರು.

ಕಾರ್ಯಕ್ರಮದಲ್ಲಿ ಲಕ್ಷ್ಮೀ, ವೆಂಕಟೇಶ್, ಬಾಲಾಜಿ, ಚೇತನ್, ಉಮೇಶ್, ಮಹೇಶ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *