ಚಾಮರಾಜನಗರ: :- ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು 2023-24ನೇ ಸಾಲಿನ ಕೃಷಿ ಮೇಳವನ್ನು ಕರ್ನಾಟಕ ಸರ್ಕಾರದ ಅಭಿವೃದ್ಧಿ ಇಲಾಖೆಗಳಾದ ಕೃಷಿ, ಜಲಾನಯನ, ತೋಟಗಾರಿಕೆ, ರೇμÉ್ಮ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನಬಾರ್ಡ್ ಮತ್ತು ಕರ್ನಾಟಕ ಹಾಲು ಮಹಾಮಂಡಳಿ ಸಂಯುಕ್ತಾಶ್ರಯದಲ್ಲಿ ನವೆಂಬರ್ 17, 18, 19 ಮತ್ತು 20ರಂದು ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿ.ಕೆ.ವಿ.ಕೆ) ಕೃಷಿ ಮೈದಾನದಲ್ಲಿ ಕೃಷಿಮೇಳ 2023 ಆಹಾರ-ಆರೋಗ್ಯ-ಆದಾಯಕ್ಕಾಗಿ ಸಿರಿಧಾನ್ಯಗಳು ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದೆ.
ಕೃಷಿ ಮೇಳವು ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಈ ಕೃಷಿ ಮೇಳದಲ್ಲಿ ಸುಧಾರಿತ ಕೃಷಿ, ತೋಟಗಾರಿಕೆ ಹಾಗೂ ಪಶುಸಂಗೋಪನೆ ಬಗ್ಗೆ ಸಮಗ್ರ ಮಾಹಿತಿಯನ್ನು ಪ್ರಾತ್ಯಕ್ಷಿಕೆಗಳ ಮೂಲಕ ರೈತರು, ವಿಸ್ತರಣಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ವೀಕ್ಷಿಸಬಹುದು. ಈ ಬಾರಿಯ ಕೃಷಿಮೇಳದ ವಿಶೇಷ ಆಕರ್ಷಣೆಗಳೆಂದರೆ ಕೃಷಿಯಲ್ಲಿ ನೂತನ ತಂತ್ರಜ್ಞಾನಗಳ ಮಾಹಿತಿ, ಜಲಾಯನ ನಿರ್ವಹಣೆ, ತೋಟಗಾರಿಕೆ ಬೆಳೆಗಳು ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆಗಳು, ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ, ಸಿರಿಧಾನ್ಯಗಳ ಮಹತ್ವ, ಔಷಧೀಯ ಮತ್ತು ಸುಗಂಧಯುಕ್ತ ಸಸ್ಯಗಳು, ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆಗಳು, ಮಳೆ ಹಾಗೂ ಮೇಲ್ಬಾವಣಿ ನೀರಿನ ಕೊಯ್ಲು, ಸಮಗ್ರ ಪೆÇೀಷಕಾಂಶಗಳ ನಿರ್ವಹಣೆ, ಪೀಡೆ ಮತ್ತು ರೋಗ, ಮಣ್ಣು ಪರೀಕ್ಷೆಗನುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ, ಕೃಷಿಯಲ್ಲಿ ಡ್ರೋನ್ ಬಳಕೆ, ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನಗಳು, ಸಾವಯವ ಕೃಷಿ ಪದ್ಧತಿಗಳು,ಮಾರುಕಟ್ಟೆ ನೈಪುಣ್ಯತೆ ಮಾಹಿತಿ, ಕೊಯ್ಲಿನೋತ್ತರ ತಾಂತ್ರಿಕತೆಗಳು, ಕೃಷಿ ಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಬಿತ್ತನೆ ಬೀಜಗಳ ಮೊಳಕೆ ಪರೀಕ್ಷೆ ಹಾಗೂ ಶೇಖರಣೆ, ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆಗಳು, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಹವಮಾನ ಚತುರ ಕೃಷಿ, ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ರೈತರ ಆವಿμÁ್ಕರಗಳು ಮತ್ತು ಕೃಷಿ ನವೋದ್ಯಮಗಳು, ಮಣ್ಣು ರಹಿತ ಕೃಷಿ, ರೈತರ ಕೃಷಿ ತಾಂತ್ರಿಕ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ಹಾಗೂ ರೈತರಿಗಾಗಿ ಚರ್ಚಾಗೋಷ್ಠಿ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ, ಇನ್ನಿತರೆ ಅಂಶಗಳು ಕೃಷಿ ಮೇಳದ ವಸ್ತು ಪ್ರದರ್ಶನದಲ್ಲಿ ಇರಲಿವೆ.
ಕೃಷಿ ಮೇಳಕ್ಕೆ ಜಿಲ್ಲೆಯ ರೈತರು, ರೈತ ಮಹಿಳೆಯರು, ಕೃಷಿ ಕಾರ್ಮಿಕರು, ವಿಸ್ತರಣಾ ಕಾರ್ಯಕರ್ತರು ಹಾಗೂ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು, ನಾಗರಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಸದುಪಯೋಗ ಪಡೆಯಬೇಕೆಂದು ಐ.ಸಿ.ಎ.ಆರ್. ಕೆ.ವಿ.ಕೆ. ಮುಖ್ಯಸ್ಥರು ಹಾಗೂ ಹಿರಿಯ ವಿಜ್ಞಾನಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.