
ಚಾಮರಾಜನಗರ: ಪೌಷ್ಟಿಕ ಆಹಾರ ಸೇವನೆ ಮೂಲಕ ಆರೋಗ್ಯವನ್ನು ಉತ್ತಮವಾಗಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆ?ನ್ಸ್ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು.
ನಗರದ ರೋಟರಿ ಭವನದ ಸಭಾಂಗಣದಲ್ಲಿ ಭಾನುವಾರ ನೆಹರು ಯುವ ಕೇಂದ್ರ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ರೋಟರಿ ಸಂಸ್ಥೆ, ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಆಹಾರಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ತರಕಾರಿ, ಸೊಪ್ಪು ಮತ್ತಿತರ ಪೌಷ್ಟಿಕ ಆಹಾರಗಳನ್ನು ಹೆಚ್ಚಾಗಿ ಸೇವಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ.ಶ್ರೀಧರ ಅವರು ಕಾನೂನನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಕಾನೂನು ನೆರವು ನೀಡಲಾಗುವುದು. ಇದರ ಬಗ್ಗೆ ಪೋ?ಕರಿಗೆ ಮಾಹಿತಿ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೋಟರಿ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಕಾಗಲವಾಡಿ ಚಂದ್ರು, ರೋಟರಿ ಜಿ .ಅಂಕಶೆಟ್ಟಿ, ಡಾ. ಗೋವಿಂದ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನೆ ಜಿಲ್ಲಾ ಸಂಯೋಜನೆ ಅಧಿಕಾರಿ ಡಾ.ಎಂ.ಬಿ.ಮಹೇಶ್ ಕಾಲೇಜು ಉಪನ್ಯಾಸಕರಾದ ಕೆ.ಎಸ್. ಮಹೇಶ್. ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆಯ ಗೌರವಾಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಅಧ್ಯಕ್ಷರಾದ ಜಿ .ಬಂಗಾರು, ನೆಹರು ಯುವ ಕೇಂದ್ರದ ಸಹನ,ಉಪನ್ಯಾಸಕರಾದ ಮೇಘಶ್ರೀ ಸುರೇಶ್ ಇತರರು ಇದ್ದರು.
