ಚಾಮರಾಜನಗರ: ಮೀನುಗಾರಿಕೆ ಇಲಾಖೆ ವತಿಯಿಂದ ಕೇಂದ್ರ ಪುರಷ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಉಪ ಯೋಜನೆ ಹಾಗೂ ಮೀನುಗಾರಿಕೆ ಇಲಾಖೆಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
೨೦೨೦-೨೧, ೨೦೨೧-೨೨, ೨೦೨೨-೨೩ನೇ ಸಾಲಿನಲ್ಲಿ ಉಳಿದಿರುವ ಗುರಿಗಳಿಗೆ ಮತ್ತು ೨೦೨೩-೨೪ನೇ ಸಾಲಿನಲ್ಲಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಉಪ ಯೋಜನೆಗಳಾದ ಮೀನುಕೃಷಿ ಕೊಳಗಳ ನಿರ್ಮಾಣ, ಬಯೋಫ್ಲಕ್ ಕೊಳಗಳ ನಿರ್ಮಾಣ, ಸಣ್ಣ ಮತ್ತು ಮಧ್ಯಮ ಬಯೋಫ್ಲಾಕ್ ಕೊಳ ನಿರ್ಮಾಣ ಮತ್ತು ಇತರೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.೪೦ ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.೬೦ ರಷ್ಟು ಸಹಾಯಧನ ನೀಡಲಾಗುವುದು.
೨೦೨೩-೨೪ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರವಲಯ, ರಾಜ್ಯವಲಯ, ಜಿಲ್ಲಾವಲಯ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಖರೀದಿ, ಮೀನುಮರಿ ಖರೀದಿ ಹಾಗೂ ಇತ್ಯಾದಿ ಯೋಜನೆಗಳಿಗೆ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ ೧೬ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಚಾಮರಾಜನಗರ ಮೀನುಗಾರಿಕೆ ಉಪ ನಿರ್ದೇಶಕರು (ಮೊ.ಸಂ ೯೫೩೫೩೭೩೭೯೩), ಮೀನುಗಾರಿಕೆ ಸಹಾಯಕ ನಿರ್ದೇಶಕರು (ಮೊ.ಸಂ ೮೧೨೩೭೪೭೩೩೪), ಗುಂಡ್ಲುಪೇಟೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮೊ.ಸಂ (ಮೊ.ಸಂ ೯೭೪೨೪೪೧೮೯೮), ಕೊಳ್ಳೇಗಾಲ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಮೊ.ಸಂ ೮೧೨೩೭೪೭೩೩೪), ಯಳಂದೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು (ಮೊ.ಸಂ ೯೭೪೨೪೪೧೮೯೮) ಸಂಪರ್ಕಿಸುವಂತೆ ಮೀನುಗಾರಿಕೆ ಉಪ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
