ಚಾಮರಾಜನಗರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಅಲ್ಪಸಂಖ್ಯಾತರ ಘಟಕದಿಂದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿರು ನಾಸೀರ್ ಹುಸೇನ್ ಅವರನ್ನು ಅಭಿನಂದನಾ ಕಾರ್ಯಕ್ರಮವನ್ನು ಸೆ. 10 ರ ಭಾನುವಾರ ಅಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಅಪ್ಜಲ್ ಷರೀಪ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರಿ ಆರಮನೆ ಮೈದಾನ ಟೆನ್ನಿಸ್ ಫೆವಿಲಿಯನ್ ನಲ್ಲಿ ಸೆ. 10 ರ ಭಾನುವಾರ ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರಾದ ಢಿ.ಕೆ. ಶಿವಕುಮಾರ್ ಹಾಗೂ ಗಣ್ಯರು ಉದ್ಘಾಟನೆ ಮಾಡಲಿದ್ದಾರೆ.
ಈಸಮಾರಂಭಕ್ಕೆ ರಾಜ್ಯಾದ್ಯಂತ ಅಲ್ಪಸಂಖ್ಯಾತರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರ ಘಟಕದ ಎಲ್ಲಾ ಪದಾಧಿಕಾರಿಗಳು, ಕಾರ್ಯ ಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಘಟಕದ ಅಧ್ಯಕ್ಷ ಷರೀಪ್ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಮಹದೇವ್ , ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ನಗರ ಘಟಕದ ಅಧ್ಯಕ್ಷ ಸೈಯದ್ ನವೀದ್, ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿಖಾನ್, ನಯಾಜ್, ಅಪ್ಜರ್, ಮುಹೀಬ್, ಅಬ್ಬಸ್, ಸುಹೇಲ್, ಜಿ.ಪಂ.ಮಾಜಿ ಸದಸ್ಯ ರಮೇಶ್ ಇತರರು ಇದ್ದರು.