ಚಾಮರಾಜನಗರ: ತೋಟಗಾರಿಕೆ ಇಲಾಖೆಯು ೨೦೨೩-೨೪ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಮಾವು ತೋಟಗಾರಿಕೆ ಬೆಳೆಯನ್ನು ಸೇರ್ಪಡೆಗೊಳಿಸಿದ್ದು, ವಿಮಾ ಸೌಲಭ್ಯ ಪಡೆಯುವಂತೆ ತಿಳಿಸಿದೆ.
ಮಾವು ಬೆಳೆಯು ಸದರಿ ಯೋಜನೆಯಡಿ ಜಿಲ್ಲೆಯ ಮುಖ್ಯ ಬೆಳೆಯಾಗಿ ಅಧಿಸೂಚನೆಯಾಗಿದ್ದು ಎಲ್ಲಾ ಹೋಬಳಿಯ ರೈತರು ಮಾವು ಬೆಳೆಗೆ ವಿಮಾ ಸೌಲಭ್ಯ ಪಡೆಯಬಹುದಾಗಿದೆ. ಮಾವು ಬೆಳೆಗೆ ಪ್ರತಿ ಹೆಕ್ಟೇರ್ ಗೆ ವಿಮೆ ಕೈಗೊಳ್ಳಲು ೪ ಸಾವಿರ ರೂ. ವಿಮಾ ಕಂತು ನಿಗದಿಯಾಗಿದೆ.
ಆಸಕ್ತ ಮಾವು ಬೆಳೆಗಾರರು ತಾಲೂಕು ಮತ್ತು ಹೋಬಳಿ ಮಟ್ಟದ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಿ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ವಿಮಾ ಕಂತು ಪಾವತಿಸಬಹುದಾಗಿದೆ. ವಿಮಾ ಕಂತು ಪಾವತಿಸಲು ಜುಲೈ ೩೧ ಕೊನೆಯ ದಿನವಾಗಿದೆ.
ಅಧಿಸೂಚಿತ ಬೆಳೆಗಳಿಗೆ ಸಾಲ ಪಡೆದ ರೈತರ ವಂತಿಕೆಯನ್ನು ಸಾಲ ಪಡೆದ ಬ್ಯಾಂಕ್ ಗಳಿಂದಲೇ ವಿಮಾ ಮೊತ್ತ ಕಡಿತಗೊಳಿಸಲಾಗುವುದು. ಆಕ್ಷೇಪಣೆಗಳಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.