ಚಾಮರಾಜನಗರ: sಸೋಮವಾರ-ಮರಿಯಾಲದ ಹುಂಡಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ರಾಜಮ್ಮ ಸಿದ್ದೇಶ್, ಉಪಾಧ್ಯಕ್ಷರಾಗಿ ಮಹದೇವಯ್ಯ ಎಸ್. ಅವಿರೋಧವಾಗಿ ಆಯ್ಕೆಯಾದರು.
ಸೋಮವಾರ ಮರಿಯಾಲದ ಹುಂಡಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜಮ್ಮ ಸಿದ್ದೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಮಹದೇವಯ್ಯ ಎಸ್. ಮಾತ್ರ ನಾಮಪತ್ರ ಸಲ್ಲಿಸಿದ್ದರು. ಉಳಿದಂತೆ ಯಾರೂ ಕೂಡಾ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಹಕಾರ ಇಲಾಖೆಯ ಹೇಮಂತ್ಕುಮಾರ್ ಅವರು ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಮುಖಂಡರು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಾರ ಹಾಕಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿದ ನೂತನ ಅಧ್ಯಕ್ಷೆ ರಾಜಮ್ಮ ಸಿದ್ದೇಶ್ ಮಾತನಾಡಿ, ಹಾಲು ಉತ್ಪಾದಕರ ಸಂಘವನ್ನು ಅಭಿವೃದ್ಧಿ ಪಡಿಸಲು ಎಲ್ಲರ ಸಹಕಾರ ಅಗತ್ಯ. ಎಲ್ಲರೂ ಒಗ್ಗೂಡಿ ಸಂಘವನ್ನು ಮುನ್ನಡೆಸೋಣ. ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಂಘದ ಅಭಿವೃದ್ಧಿ ಮಾಡೋಣ ಎಂದರು.
ಇದೇ ಸಂದರ್ಭದಲ್ಲಿ ಸದಸ್ಯರಾದ ನಾಗೇಗೌಡ, ದೊಡ್ಡೇಗೌಡ, ಕುಮಾರ್, ಮಹದೇವಸ್ವಾಮಿ, ಶಿವಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂಜುಂಡೇಗೌಡ, ಮುಖಂಡರಾದ ಎಂ.ಗುರುಪ್ರಸಾದ್, ಮಾಜಿ ಗ್ರಾ.ಪಂ. ಸದಸ್ಯ ರಾಮೇಗೌಡ, ಮರಿಯಾಲದಹುಂಡಿ ಕುಮಾರ್, ಮಲ್ಲೇಶ್, ಮಹೇಶ್, ಮಹದೇವೇಗೌಡ, ಕೆಂಚಮಹದೇವೇಗೌಡ, ನಾಗರಾಜು, ಮಹದೇವಪ್ಪ, ಗುರುಸಿದ್ದಯ್ಯ, ಮಹದೇವಗೌಡ, ಮಂಜು, ನಾಗರಾಜು ಸೇರಿದಂತೆ ಗ್ರಾಮಸ್ಥರಿದ್ದರು.