ಮಲ್ಲಿಕಾರ್ಜುನ ಖರ್ಗೆಯವರು ಪಿಎಂ ಆಗುವುದು ಸಿದ್ದರಾಮಯ್ಯನವರಿಗೆ ಇಷ್ಠ ಇಲ್ಲ : ಗಣೇಶ್‌ಪ್ರಸಾದ್

ಚಾಮರಾಜನಗರ: ಐಎನ್‌ಡಿಐಎ ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೆಸರು ಚಲಾವಣೆಗೆ ಬಂದು ದೇಶಾದ್ಯಂತ ವ್ಯಾಪಕ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಹುಲ್‌ಗಾಂಧಿ ಪ್ರಧಾನಿಯಾಗಬೇಕು ಎಂದು ಅಭಿಪ್ರಾಯ ಹೊರ ಹಾಕಿರುವುದನ್ನು ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಗಣೇಶ್‌ಪ್ರಸಾದ್ ತೀವ್ರವಾಗಿ ಖಂಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಧಾನಿ ಅಭ್ಯರ್ಥಿಗೆ ಬಿಂಬಿತವಾಗುತ್ತಿದ್ದ0ತೆ ಪಕ್ಷದ ರಾಜ್ಯದ ಮುಖಂಡರು ಸ್ವಾಗತಿಸಿ ಬೆಂಬಲ ವ್ಯಕ್ತಪಡಿಸಿದರು. ಈ ನಡುವೆ ಇತ್ತೀಚಿಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಹುಲ್‌ಗಾಂಧಿ ಈ ದೇಶದ ಪ್ರಧಾನಿ ಆಗಬೇಕು ಎಂದು ಹೇಳಿಕೆ ನೀಡಿರುವುದು ಖರ್ಗೆಯವರ ಅಭಿಮಾನಿಗಳಿಗೆ ಬಹಳ ನೋವು ಉಂಟು ಮಾಡಿದೆ.
ದಲಿತ ಮುಖ್ಯಮಂತ್ರಿ, ಪ್ರಧಾನಿ ಆಗುವುದು ಸಿದ್ದರಾಮಯ್ಯ ಅವರಿಗೆ ಇಷ್ಠ ಇಲ್ಲ ಅನ್ನುವುದು ಈ ಹೇಳಿಕೆಯಿಂದ ಗೊತ್ತಾಗುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಚಲಾವಣೆಗೆ ಬರುತ್ತಿದ್ದಂತೆ ದಲಿತ ವಿರೋಧಿ ಹೇಳಿಕೆ ಹೊರಹಾಕಿರುವುದಕ್ಕೆ ಗಣೇಶ್‌ಪ್ರಸಾದ್ ತೀವ್ರವಾಗಿ ಖಂಡಿಸಿದ್ದಾರೆ.

Leave a Reply

Your email address will not be published. Required fields are marked *