ಮಹಿಳೆಯರ ಸಬಳೀಕರಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಒತ್ತು : ಕೆರಹಳ್ಳಿ ನವೀನ್

ಬದನಗುಪ್ಪೆ ವಲಯ ಪ್ರಗತಿ ಬಂಧು ಒಕ್ಕುಟದ ಸಾಧನೆ ಸಮಾವೇಶ ಉದ್ಗಾಟನೆ
ಚಾಮರಾಜನಗರ, ಡಿ. 20- ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಹಿಳೆಯರಿಗೆ ಸಾಲ ನೀಡುವುದ ಜೊತೆಗೆ ಅವರು ಸ್ವಾವಲಂಬನೆಯಿಂದ ದುಡಿದು ಸಾಲ ಮರು ಪಾವತಿ ಮಾಡುವ ಮಾರ್ಗವನ್ನು ಸಹ ತೋರಿಸುತ್ತಾರೆ. ಕುಟುಂಬ ನೆಮ್ಮದಿಯಿಂದ ಜೀವನ ನಡೆಸುವ ವಾತಾವರಣವನ್ನು ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ಜಿ.ಪಂ. ಮಾಜಿ ಸದಸ್ಯ ಕೆರೆಹಳ್ಳಿ ನವೀನ್ ತಿಳಿಸಿದರು.

ತಾಲೂಕಿನ ಪಣ್ಯದಹುಂಡಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿಸಿ ಟ್ರಸ್ಟ್ ಚಾ.ನಗರ ತಾಲೂಕು ಘಟಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬದನಗುಪ್ಪೆ ವಲಯದಿಂದ ನಡೆದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಸಾಧನ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸ್ವಸಹಾಯ ಸಂಘಗಳು ರಚನೆ ಮತ್ತು ಕಾರ್ಯವ್ಯಾಪ್ತಿ ಬಹಳ ವಿಸ್ತಾರವಾಗುತ್ತಿದೆ. ಪ್ರಪ್ರಥಮವಾಗಿ ಮಹಿಳಾ ಮಕ್ಕಳ ಕಲ್ಯಾಣ ಸಚಿವರಾಗಿದ್ದ ಮೋಟಮ್ಮ ಅವರು ಮಹಿಳಾ ಸ್ವಸಹಾಯ ಸಂಘಗಳನ್ನು ರಚನೆ ಅವರಿಗೆ ಸಾಲ ಸೌಲಭ್ಯಗಳನ್ನು ಕಲ್ಪಿಸಿ, ಸುತ್ತು ನಿಧಿ ನೀಡಿ ಮಹಿಳೆಯರು ಅರ್ಥಿಕವಾಗಿ ಸ್ವಾವಲಂಬಿಗಳಾನ್ನಾಗಿ ಮಾಡಲು ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದರು. ಅಂದು ಅವರು ದೂರದೃಷ್ಟಿದ ಯೋಜನೆ ಬಹಳಷ್ಟು ಉಪಯುಕ್ತವಾಗುತ್ತಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿದ ಬಳಿಕ ಗ್ರಾಮಾಂತರ ಪ್ರದೇಶಗಳಲ್ಲಿರುವ ಜನರ ಜೀವನ ಶೈಲಿಯು ಮಹತ್ತರವಾಗಿ ಬದಲಾವಣೆಯಾಗಿದೆ. ಸಂಘಗಳನ್ನು ಸ್ಥಾಪನೆ ಮಾಡುವ ಜೊತೆಗೆ ಪ್ರತಿ ವಿಚಾರಗಳಲ್ಲಿ ಸಂಘಗಳ ಮುನ್ನಡೆ, ಶಿಸ್ತು ಹಾಗೂ ಸೇವಾ ಮನೋಭಾವನೆಯನ್ನು ಮೈಗೂಡಿಸುವ ಜೊತೆಗೆ ಸಾಲ ನೀಡುವ ಉದ್ದೇಶವು ಸಫಲವಾಗುವವರೆಗೂ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಾಧನೆ ಮಾಡುವವರಿಗೆ ಸಂಘಗಳ ಪ್ರತಿನಿಧಿಗಳೊಂದಿಗೆ ನಿಕಟ ಸಂಪರ್ಕವನ್ನು ಹೊಂದಿ ಸಂಘಗಳ ಅರ್ಥಿಕ ಅಭಿವೃದ್ದಿಗೆ ಶ್ರಮಿಸುವ ಮೂಲಕ ಹಳ್ಳಿಗಳ ಪ್ರಗತಿಯಲ್ಲಿ ಸಂಸ್ಥೆ ಹೆಚ್ಚಿನ ಶ್ರಮ ವಹಿಸುತ್ತಿದೆ. ಇಲ್ಲಿ ಸೇರಿರುವ ಜನಸ್ತೋಮಕ್ಕೆ ಇದಕ್ಕೆ ಸಾಕ್ಷಿಯಾಗಿದೆ. ಮಂಜುನಾಥಸ್ವಾಮಿ ಕೃಪಾಶೀರ್ವಾದ ನಿಮ್ಮೆಲ್ಲರ ಮೇಲೆ ಇರಲಿ ಎಂದರು.

ರಾಜ್ಯದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೇತೃತ್ವದ ಸರ್ಕಾರ ಮಹಿಳೆಯರಿಗೆ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತು ನೀಡಿದೆ, ಮಹಿಳೆಯರಿಗಾಗಿ ಉಚಿತ ಸಾರಿಗೆ ಬಸ್ ಸೇವೆ, ಪ್ರತಿ ಕುಟುಂಬದ ಮಹಿಳಾ ಯಜಮಾನಿಗೆ ತಿಂಗಳು 2 ಸಾವಿರ ರೂ. ಪ್ರೋತ್ಸಾಹ ಧನ, ಪ್ರತಿ ಕುಟುಂಬಕ್ಕೆ 5 ಕೆಜಿ ಉಚಿತ ಅಕ್ಕಿ ಬದಲು ನೇರವಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ನೀಡುತ್ತಿದೆ. ಈಗ ಜನವರಿಯೀದಮ ಯುವ ನಿಧಿಯನ್ನು ನೀಡುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ದಿ ಮತ್ತು ಮಹಿಳೆಯರ ಸ್ವಾವಲಂಬಿನೆ ಬದುಕಿಗೆ ಹೆಚ್ಚಿನ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದು ಕೆರೆಹಳ್ಳಿ ನವೀನ್ ತಿಳಿಸಿದರು.

ಸಂಸ್ಥೆಯ ಜಿಲ್ಲಾ ಸಂಯೋಜಕಿ ಲತಾಬಂಗೇರಾ ಮಾತನಾಡಿ, ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಪ್ರಗತಿ ಬಂಧು ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರ ಸಬಲೀಕರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಅವರಿಗೆ ಸಾಲ ನೀಉಡವ ಜೊತೆಗೆ ಕೌಶಲ್ಯ ತರಬೇತಿಗಳನ್ನು ನೀಡಿ, ಅವರು ಸ್ವಾವಲಂಬನೆಯಿಂದ ದುಡಿದು ಸಾಲ ಮರು ಪಾವತಿ ಮಾಡುವ ಚೈತನ್ಯವನ್ನು ಕಲ್ಪಿಸಿಕೊಡಲಾಗುತ್ತದೆ ಎಂದರು.

ವೇದಿಕೆಯಲ್ಲಿ ಹೆಗ್ಗೋಠಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ, ಎಪಿಎಂಸಿ ನಿರ್ದೇಶಕ ಗುರುಸ್ವಾಮಿ, ಹೆಗ್ಗೋಠಾರ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಮಾದಪ್ಪ, ಬದನಗುಪ್ಪೆ ಗ್ರಾ.ಪಂ. ಅಧ್ಯಕ್ಷ ಕುಮಾರ್, ಯೋಜನಾಧಿಕಾರಿ ಹರೀಶಕುಮಾರ್, ಪ್ರಗತಿ ಬಂಧು ಸ್ವ ಸಹಾಯ ಸಮಘಗಳ ಒಕ್ಕೂಟದ ಬದನಗುಪ್ಪೆ ವಲಯದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸದಸ್ಯರು ಇದ್ದರು.

Leave a Reply

Your email address will not be published. Required fields are marked *