ರಾಹುಲ್‍ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಚಾಮರಾಜನಗರ: ಸಂಸತ್ ಭವನದ ಆವರಣದಲ್ಲಿ ರಾಹುಲ್‍ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷದ ನಾಯಕರು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಯನ್ನು ಅವಮಾನಿಸಿರುವ ರೀತಿಯಲ್ಲಿ ಅಣುಕು ಪ್ರದರ್ಶನ ನಡೆಸಿದ್ದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟಿಸಿದರು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಇ ವೇಳೆ ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನೂರೊಂದುಶೆಟ್ಟಿ, ಬಾಲಸುಬ್ರಹ್ಮಣ್ಯಂ, ರಾಜು, ಶಿವು, ಪ್ರಕಾಶ್, ಮಂಜು ಮತ್ತಿತರರಿದ್ದರು.

Leave a Reply

Your email address will not be published. Required fields are marked *