ರೈತನ ಮೇಲೆ ಚಿರತೆ ದಾಳಿ : ಪ್ರಾಣಾಪಾಯದಿಂದ ಪಾರು

ಕೊಳ್ಳೇಗಾಲ: ಬೆಳೆಯನ್ನು ಕಾಯಲು ಜಮೀನನಲ್ಲಿ ಮಲಗಿದ್ದ ರೈತನ ಮೇಲೆ ಚಿರತೆ ದಾಳಿಸಿದೆ.
ಕೊಳ್ಳೇಗಾಲ ತಾಲೂಕಿನ ಕಂಚಗಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ನಂಜಪ್ಪ ಎಂಬವರೇ ಚಿರತೆ ದಾಳಿಯಿಂದ ಪಾರಾದ ರೈತ.
ತನ್ನ ಜಮೀನಿನಲ್ಲಿ ಬೆಳೆದಿದ್ದ ಜೋಳದ ಫಸಲನ್ನು ಕಾಯಲು ಜಮೀನಿನಲ್ಲಿ ಮೊಬೈಲ್ ಹಿಡಿದು ಮಲಗಿದ್ದ ವೇಳೆ ಚಿರತೆ ಬಂದು ಪರಚಿದೆ. ಕೂಡಲೇ, ಎಚ್ಚೆತ್ತ ನಂಜಪ್ಪ ಕೋಲು ಹಿಡಿದು ಕಿರುಚಿದಾಗ ಚಿರತೆ ಪರಾರಿಯಾಗಿದೆ ಎನ್ನಲಾಗಿದೆ.
ಚಿರತೆ ದಾಳಿಯಿಂದ ಸಣ್ಣಪುಟ್ಟ ಗಾಯಗಳಾಗಿದ್ದು, ಕಾಮಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *