ವಸತಿ ಶಾಲೆ, ಭರಚುಕ್ಕಿ ಸೇರಿ ವಿವಿಧೆಡೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್ ಭೇಟಿ: ಸೌಲಭ್ಯಗಳ ಪರಿಶೀಲನೆ

ಚಾಮರಾಜನಗರ: ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್ ಅವರು ಇಂದು ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ವಸತಿ ಶಾಲೆ, ಕಣ್ಣಿನ ಆರೋಗ್ಯ ಸೇವೆಯಾದ ಆಶಾಕಿರಣ ಪ್ರಗತಿ ಪರಿಶೀಲಿಸಿದರು. ಪ್ರಸಿದ್ದ ಪ್ರವಾಸಿ ತಾಣ ಭರಚುಕ್ಕಿಗೆ ಭೇಟಿಕೊಟ್ಟು ಪ್ರವಾಸಿ ಸೌಲಭ್ಯಗಳನ್ನು ವೀಕ್ಷಿಸಿದರು.

ಯಳಂದೂರು ತಾಲ್ಲೂಕಿನ ವಡಗೆರೆಯಲ್ಲಿರುವ ಅಗರ-ಮಾಂಬಳ್ಳಿ ಹೋಬಳಿಗೆ ಸೇರಿದ ಕಿತ್ತೂರು ರಾಣಿಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಕೊಠಡಿಗಳು, ಸಭಾಂಗಣ ಇತರೆ ಸ್ಥಳಗಳನ್ನು ವೀಕ್ಷಣೆ ಮಾಡಿದರು. ವಿದ್ಯಾರ್ಥಿನಿಯರಿಗೆ ವಸತಿ ಶಾಲೆಯಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಯವರು ಗುಣಮಟ್ಟದ ಊಟ-ಉಪಹಾರ ನೀಡಲಾಗುತ್ತಿದೆಯೇ, ಕೊಠಡಿಗಳು, ಶೌಚಾಲಯ ಮತ್ತಿತರ ಕಡೆ ಶುಚಿತ್ವ ಕಾಪಾಡಿಕೊಳ್ಳಲಾಗುತ್ತಿದೆಯೇ? ಶೈಕ್ಷಣಿಕ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿ ತಿಳಿದುಕೊಂಡರು.

ವಿದ್ಯಾರ್ಥಿನಿಯರು ಶ್ರಮಪಟ್ಟು ಓದಬೇಕು. ಹೆಚ್ಚು ಅಂಕಗಳಿಸಿ ನಿಮಗೆ ಆಸಕ್ತಿ ಇರುವ ವಿ?ಯಗಳನ್ನು ಕಾಲೇಜು ಹಂತದಲಿ ಆಯ್ಕೆ ಮಾಡಿಕೊಳ್ಳಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸಿ. ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಂಡರೆ ಮುಂದಿನ ಭವಿ? ಉತ್ತಮವಾಗಲಿದೆ ಎಂದು ಜಿಲ್ಲಾಧಿಕಾರಿಯವರು ಸಲಹೆ ಮಾಡಿದರು.

ಬಳಿಕ ಯಳಂದೂರು ತಾಲ್ಲೂಕಿನ ಆಲ್ಕೆರೆ ಅಗ್ರಹಾರ ಗ್ರಾಮಕ್ಕೆ ಭೇಟಿ ನೀಡಿ ಅಂಧತ್ವ ಪ್ರಮಾಣ ತಗ್ಗಿಸಲು ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ನಡೆಸಲಾಗುತ್ತಿರುವ ನೇತ್ರ ತಪಾಸಣೆ ಆಂದೋಲನ ಕಾರ್ಯವನ್ನು ಜಿಲ್ಲಾಧಿಕಾರಿಯವರು ವೀಕ್ಷಿಸಿದರು.

ಆಶಾ ಕಾರ್ಯಕರ್ತೆಯರು ಆರೋಗ್ಯ ಸಿಬ್ಬಂದಿಯವರೊಂದಿಗೆ ಗ್ರಾಮದಲ್ಲಿ ಸಂಚರಿಸಿದ ಜಿಲ್ಲಾಧಿಕಾರಿಯವರು ಕಣ್ಣಿನ ಆರೋಗ್ಯ ಸಂರಕ್ಷಣೆಗೆ ಕೈಗೊಂಡಿರುವ ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು. ಕಣ್ಣಿನ ತೊಂದರೆಗಳನ್ನು ಪರಿಹರಿಸಲು ವಿಶೇ?ವಾಗಿ ನಡೆಸುತ್ತಿರುವ ಆಶಾಕಿರಣ ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.

ಇದೇ ವೇಳೆ ಗ್ರಾಮದ ಶಾಲಾ ಮಕ್ಕಳೊಂದಿಗೆ ಜಿಲ್ಲಾಧಿಕಾರಿಯವರುಆತ್ಮೀಯವಾಗಿ ಮಾತನಾಡಿದರು.

ಪ್ರಸಿದ್ಧ ಪ್ರವಾಸಿ ಸ್ಥಳ ಭರಚುಕ್ಕಿ ಹಾಗೂ ಹಿನ್ನೀರಿನ ಪ್ರದೇಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಅಲ್ಲಿ ಪ್ರವಾಸಿಗರಿಗೆ ಒದಗಿಸಿರು ಸೌಲಭ್ಯಗಳನ್ನು ಪರಿಶೀಲನೆ ಮಾಡಿದರು. ಪ್ರವಾಸಿಗರು ವಹಿಸಬೇಕಿರುವ ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳು ಪಾಲನೆ ಮಾಡುವಂತೆ ಮನವರಿಕೆ ಮಾಡಿಕೊಡಬೇಕುಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ತಹಶಿಲ್ದಾರ್ ಮಂಜುಳ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *