ವಿಜೃಂಭಣೆಯಿಂದ ಜರುಗಿದ ಚಾಮರಾಜೇಶ್ವರ ಬ್ರಹ್ಮ ರಥೋತ್ಸವ

ಚಾಮರಾಜನಗರ: ಆಷಾಡ ಮಾಸದಲ್ಲಿ ಚಾಮರಾಜನಗರದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಎಂದರೆ ಚಾಮರಾಜೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಇಂದು ಅಪಾರ ಭಕ್ತ ಜನಸ್ತೋಮದೊಂದಿಗೆ ವಿಜೃಂಭಣೆಯಿಂದ ಜರುಗಿತು.

ಮಧ್ಯಾಹ್ನ ೧೨ ರಿಂದ ೧ ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಶ್ರೀ ಚಾಮರಾಜೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ರಥವು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿತು. ಸಾವಿರಾರು ಭಕ್ತರು ಸಂತಸದಿಂದ ರಥವನ್ನು ಎಳೆದು ದೇವರ ಕೃಪೆಗೆ ಪಾತ್ರರಾದರು.

ನವ ದಂಪತಿಗಳಿಂದ ರಥಕ್ಕೆ ಹಣ್ಣು ದವನ: ದಾಂಪತ್ಯ ಜೀವನಕ್ಕೆ ನೂತನವಾಗಿ ಕಾಲಿಟ್ಟ ನವದಂಪತಿಗಳು ಹಣ್ಣು ದವನ ಎಸೆದರು. ತಮ್ಮ ಇಷ್ಟಾರ್ಥಗಳು ನೆರವೇರಲೆಂದು ವಿಶೇಷ ಪ್ರಾರ್ಥನೆ ಮಾಡಿಕೊಂಡರು.

ವಿವಿಧ ಸಂಘ ಸಂಸ್ಥೆಗಳಿಂದ ಅನ್ನ ಸಂತರ್ಪಣೆ ಮಾಡಲಾಯಿತು. ಚಾಮರಾಜನಗರ, ಮೈಸೂರು ಜಿಲ್ಲೆ ಸೇರಿದಂತೆ ಹಲವೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ರಥೋತ್ಸವ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Leave a Reply

Your email address will not be published. Required fields are marked *